Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುದ್ಧದಿಂದ ಇಸ್ರೇಲ್ ಜಿಡಿಪಿ ಶೇ 1.4ರಷ್ಟು ಕುಸಿತ


ಜೆರುಸಲೇಂ : ಇಸ್ರೇಲ್​ನ ಆರ್ಥಿಕತೆಯಲ್ಲಿ ತೀವ್ರ ಕುಸಿತ ಕಂಡು ಬಂದಿದೆ ಎಂದು ದೇಶದ ಸೆಂಟ್ರಲ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ ಭಾನುವಾರ ಬಿಡುಗಡೆ ಮಾಡಿದ ವರದಿ ತಿಳಿಸಿದೆ. ಮೊದಲ ತ್ರೈಮಾಸಿಕದಲ್ಲಿ ತೀವ್ರ ಏರಿಕೆಯ ನಂತರ ದೇಶದ ಆರ್ಥಿಕತೆಯು ತೀವ್ರವಾಗಿ ಕುಸಿದಿದೆ ಎಂದು ವರದಿ ತಿಳಿಸಿದೆ. ಮೊದಲ ತ್ರೈಮಾಸಿಕದ ಜಿಡಿಪಿಗೆ ಹೋಲಿಸಿದರೆ ಎರಡನೇ ತ್ರೈಮಾಸಿಕದಲ್ಲಿ ಇಸ್ರೇಲ್​ನ ಜಿಡಿಪಿ ಶೇಕಡಾ 1.2 ರಷ್ಟು ಏರಿಕೆಯಾಗಿ ಶೇಕಡಾ 17.3 ಕ್ಕೆ ತಲುಪಿತ್ತು. ವಾರ್ಷಿಕ ಆಧಾರದ ಮೇಲೆ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇಸ್ರೇಲ್ ಜಿಡಿಪಿ ಶೇಕಡಾ 1.4 ರಷ್ಟು ಕುಸಿತ ಕಂಡಿದೆ.


ಇಸ್ರೇಲ್​ನಲ್ಲಿ ಖಾಸಗಿ ಬಳಕೆಯ ವೆಚ್ಚವು ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 12 ರಷ್ಟು ಹೆಚ್ಚಾಗಿದೆ ಎಂದು ಡೇಟಾ ತೋರಿಸಿದೆ. ಇದು ಮೊದಲ ತ್ರೈಮಾಸಿಕದಲ್ಲಿ ದಾಖಲಾಗಿದ್ದ ಶೇಕಡಾ 26.3 ರಷ್ಟು ಏರಿಕೆಗಿಂತ ಕಡಿಮೆಯಾಗಿದೆ. ಕಳೆದ ವರ್ಷ ಅಕ್ಟೋಬರ್ 7 ರಂದು ನಡೆದ ಹಮಾಸ್ ದಾಳಿಯ ಪರಿಣಾಮಗಳಿಂದ ಇಸ್ರೇಲಿ ಆರ್ಥಿಕತೆಯು ಚೇತರಿಸಿಕೊಂಡಿಲ್ಲವೆಂಬುದನ್ನು ಈ ಕಡಿಮೆ ಬೆಳವಣಿಗೆಯ ಅಂಕಿಅಂಶಗಳು ಸೂಚಿಸುತ್ತವೆ ಎಂದು ಯೆಡಿಯೋತ್ ಅಹ್ರೋನೋತ್ ಪತ್ರಿಕೆಯ ಹಿರಿಯ ವಿಶ್ಲೇಷಕ ಗ್ಯಾಡ್ ಲಿಯೋರ್ ಕ್ಸಿನ್ಹುವಾಗೆ ತಿಳಿಸಿದರು.


ಸರಕು ಮತ್ತು ಸೇವೆಗಳ ಆಮದುಗಳು ಕೂಡ ಕಡಿಮೆಯಾಗಿದ್ದು, ಮೊದಲ ತ್ರೈಮಾಸಿಕದಲ್ಲಿ ಶೇಕಡಾ 32.7 ರಷ್ಟು ಹೆಚ್ಚಳದ ನಂತರ ಎರಡನೇ ತ್ರೈಮಾಸಿಕದಲ್ಲಿ ಆಮದುಗಳು ಶೇಕಡಾ 11.1 ರಷ್ಟು ಕಡಿಮೆಯಾಗಿವೆ. ವಜ್ರಗಳು ಮತ್ತು ಸ್ಟಾರ್ಟ್ ಅಪ್ ಕಂಪನಿಗಳನ್ನು ಹೊರತುಪಡಿಸಿ ಸರಕು ಮತ್ತು ಸೇವೆಗಳ ರಫ್ತು ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 7.1 ರಷ್ಟು ಕಡಿಮೆಯಾಗಿದೆ. ಮೊದಲ ತ್ರೈಮಾಸಿಕದಲ್ಲಿ ಇದು ಶೇಕಡಾ 10.4 ರಷ್ಟು ಇಳಿಕೆಯಾಗಿತ್ತು.






ಅಕ್ಟೋಬರ್ 7, 2023 ರಿಂದ ಇಸ್ರೇಲ್​ ಗಾಜಾ ಪಟ್ಟಿಯಲ್ಲಿ ಯುದ್ಧ ನಡೆಸುತ್ತಿದೆ. ಈ ಯುದ್ಧದಲ್ಲಿ ಈವರೆಗೆ ಸುಮಾರು 40,100 ಜನ ಸಾವಿಗೀಡಾಗಿದ್ದು, 92,600 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಪ್ರಸ್ತುತ ಯುದ್ಧಕ್ಕೆ ಮಾಡಲಾಗುತ್ತಿರುವ ವೆಚ್ಚ ಕೂಡ ಇಸ್ರೇಲ್​ ಆರ್ಥಿಕತೆ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.


ಗಾಜಾ ಯುದ್ಧದ ಬಗ್ಗೆ ಹಮಾಸ್ ಜೊತೆ ನಡೆಯುತ್ತಿರುವ ಮಾತುಕತೆಯಲ್ಲಿ ಕದನ ವಿರಾಮ ಒಪ್ಪಂದಕ್ಕೆ ಬರುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಇಸ್ರೇಲ್ ವಿರೋಧ ಪಕ್ಷದ ನಾಯಕ ಯೈರ್ ಲ್ಯಾಪಿಡ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಒತ್ತಾಯಿಸಿದ್ದಾರೆ. "ಇದು ಕೊನೆಯ ಅವಕಾಶವಾಗಬಹುದು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಇಂದು ಬೆಳಿಗ್ಗೆ ಹೇಳಿದ್ದಾರೆ. ಈ ಅವಕಾಶ ಕಳೆದುಕೊಳ್ಳಬೇಡಿ ಎಂದು ನೆತನ್ಯಾಹು ಅವರಿಗೆ ಮನವಿ" ಎಂದು ಯೈರ್ ಲ್ಯಾಪಿಡ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬರೆದಿದ್ದಾರೆ



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ