Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಟಿ ಕಂಪನಿಗಳಿಗೆ ಅಗತ್ಯ ನೀರು ಪೂರೈಕೆ: ಜಲ ಮಂಡಳಿ ಭರವಸೆ!

ಬೆಂಗಳೂರು, ಮಾರ್ಚ್ 29: ಬೆಂಗಳೂರು ನಗರದಲ್ಲಿರುವ ಎಲ್ಲ ಐಟಿ ಕಂಪನಿಗಳಿಗೆ ಸಾಕಷ್ಟು ನೀರು ಪೂರೈಸಲಾಗುವುದು. ಈ ವಿಚಾರದಲ್ಲಿ ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಭರವಸೆ ನೀಡಿದೆ.

ಮನೆಯಿಂದಲೇ ಕೆಲಸದ ಬೇಡಿಕೆ ಮತ್ತು ನೀರಿನ ಬಿಕ್ಕಟ್ಟಿನಿಂದಾಗಿ ಅನೇಕ ಐಟಿ ಕಂಪನಿಗಳು ನೆಲೆಯನ್ನು ಬದಲಾಯಿಸಲು ನೆರೆಯ ರಾಜ್ಯಗಳಿಂದ ಆಹ್ವಾನ ಸ್ವೀಕರಿಸುತ್ತಿವೆ ಎಂಬ ವದಂತಿಗಳ ಬೆನ್ನಲ್ಲೇ, ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಗುರುವಾರ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘದೊಂದಿಗೆ ಸಭೆ ನಡೆಸಿದರು. ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ನಗರದಲ್ಲಿರುವ ಐಟಿ ಕಂಪನಿಗಳಿಗೆ ಸಾಕಷ್ಟು ನೀರು ದೊರೆಯುವಂತೆ ಮಾಡಲಿದ್ದೇವೆ. ನಗರದಾದ್ಯಂತ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಾವು ಕ್ರಮಗಳನ್ನು ಕೈಗೊಂಡಿದ್ದೇವೆ ಮತ್ತು ಕಂಪನಿಗಳಿಗೆ ಕೂಡ ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಕಂಪನಿಗಳು ನೀರನ್ನು ಎಚ್ಚರಿಕೆಯಿಂದ ಬಳಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಅನಗತ್ಯ ಉದ್ದೇಶಗಳಿಗಾಗಿ ನೀರಿನ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಬೆಂಗಳೂರಿನ ನೀರಿನ ಬಿಕ್ಕಟ್ಟಿನಿಂದಾಗಿ ವರ್ಕ್ ಫ್ರಮ್ ಹೋಮ್ ಆಯ್ಕೆ ನೀಡಬೇಕೆಂದು ನಗರದ ಅನೇಕ ಐಟಿ ಉದ್ಯೋಗಿಗಳು ಮನವಿ ಮಾಡಿದ್ದರು. ತಜ್ಞರು ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ನಗರದಲ್ಲಿ ಸುಮಾರು 15ಲಕ್ಷ ಐಟಿ ಉದ್ಯೋಗಿಗಳಿದ್ದು, ವರ್ಕ್ ಫ್ರಮ್ ಹೋಮ್ ನೀಡುವುದರಿಂದ ಸುಮಾರು 10 ಲಕ್ಷ ಜನ ಅವರ ಊರುಗಳಿಗೆ ತೆರಳುವ ಸಾಧ್ಯತೆ ಇದೆ. ಇದರಿಂದ ನಗರದ ನೀರಿನ ಒತ್ತಡ ಕಡಿಮೆ ಮಾಡಬಹುದು ಎಂದು ಇತ್ತೀಚೆಗೆ ತಜ್ಞರು ಹೇಳಿದ್ದರು.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ