Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮ್ಮು-ಕಾಶ್ಮೀರ, ಅಲೆಕ್ಸಾಂಡರ್ ಕೆಡವಿದ ಸೂರ್ಯ ದೇವಾಲಯ ಪುನರ್​​ ನಿರ್ಮಾಣ

ಜಮ್ಮು-ಕಾಶ್ಮೀರ27: ಇಲ್ಲಿ ಅನೇಕ ಬದಲಾವಣೆಗಳು ಆಗುತ್ತಿದೆ. ಹಿಂಸೆಗಳನ್ನು ಕಾಣುತ್ತಿದ್ದ ಈ ರಾಜ್ಯದಲ್ಲಿ ಶಾಂತಿ, ಧಾರ್ಮಿಕ ಬದಲಾವಣೆಗಳು ಆಗುತ್ತಿದೆ. ಇದೀಗ ಇಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಮಾಡಲು ಇಲ್ಲಿನ ಜನ ಮುಂದಾಗಿದ್ದಾರೆ.

ಹೌದು ಜಮ್ಮು ಮತ್ತು ಕಾಶ್ಮೀರದಲ್ಲಿರುವ ದೇಶದ ಅತ್ಯಂತ ಪುರಾತನ ಸೂರ್ಯ ದೇವಾಲಯವನ್ನು ಪುನರ್​​​ನಿರ್ಮಾಣ ಮಾಡಲಾಗುತ್ತಿದೆ. ಅನಂತನಾಗ್‌ನಲ್ಲಿ ನಿರ್ಮಿಸಲಾದ ಈ ಸೂರ್ಯ ದೇವಾಲಯವನ್ನು ಶೀಘ್ರದಲ್ಲೇ ನವೀಕರಿಸಲಾಗುವುದು ಎಂದು ಹೇಳಲಾಗಿದೆ. ಇನ್ನು ದೇವಾಲಯಕ್ಕಾಗಿ ಒಂದು ಸಮಿತಿಯನ್ನು ರಚನೆ ಮಾಡಲಾಗಿದೆ. ಇದರ ಮೊದಲ ಸಭೆಯಲ್ಲಿ ದೇವಾಲಯ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸುವ ತಿರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಮಾರ್ತಾಂಡ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಹುದಿನಗಳಿಂದ ಬೇಡಿಕೆ ಇತ್ತು. ಇದಕ್ಕಾಗಿ ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮಗಳ ಜನರು ದೇವಾಲಯದ ಪುನರ್​​​ ನಿರ್ಮಾಣಕ್ಕೆ ಅಭಿಯಾನ ಕೂಡ ನಡೆಸಿದರು ಎಂದು ಹೇಳಲಾಗಿದೆ. ಈ ದೇವಾಲಯವು ಶ್ರೀನಗರದಿಂದ ಸುಮಾರು 63 ಕಿಲೋಮೀಟರ್ ದೂರದಲ್ಲಿದೆ. ಈ ದೇವಾಲಯವನ್ನು ಕ್ರಿ.ಶ.750 ರಲ್ಲಿ ರಾಜ ಲಾಲಿದಾದಿತ್ಯ ನಿರ್ಮಿಸಿದ್ದ, ಇದು ದೇಶದ ಹಳೆಯ ಪರಂಪರೆಗಳಲ್ಲಿ ಇದೂ ಒಂದಾಗಿದ್ದು, ಇದೀಗ ಇದನ್ನು ಪುನರ್​​​ ನಿರ್ಮಾಣ ಮಾಡಲಾಗುತ್ತಿದೆ.

ಈ ಸೂರ್ಯ ದೇವಾಲಯವು ಕಾಶ್ಮೀರಿ ವಾಸ್ತುಶಿಲ್ಪದ ಸೌಂದರ್ಯವನ್ನು ಒಳಗೊಂಡಿದೆ. ಈ ದೇವಾಲಯದ ನಿರ್ಮಾಣದಲ್ಲಿ ಕಂಧಾರ, ಚೈನೀಸ್ ಮತ್ತು ಗುಪ್ತ ರೋಮನ್ ಶೈಲಿಗಳನ್ನು ಬಳಸಲಾಗಿದೆ. ದೇವಾಲಯವು 270 ಅಡಿ ವಿಸ್ತೀರ್ಣವನ್ನು ಹೊಂದಿದ್ದು, ಅಗಲ 180 ಅಡಿ ಇದೆ. ಇದರ ಜತೆಗೆ ಇನ್ನು ಆಶ್ಚರ್ಯಕರ ಸಂಗತಿಯೆಂದರೆ, ಮಾರ್ತಾಂಡ ದೇವಾಲಯವು ಎಎಸ್‌ಐ ಸಂರಕ್ಷಿತ ತಾಣಗಳಲ್ಲಿ ಒಂದಾಗಿದೆ. ಆದರೆ ಇಲ್ಲಿ ಸೂರ್ಯನಿಗೆ ಇಂದು ಪೂಜೆ ನಡೆಯುತ್ತಿಲ್ಲ ಎಂದು ಸಮಿತಿ ಹೇಳಿದೆ. ಗುಜರಾತ್ ಮತ್ತು ಒಡಿಶಾದಲ್ಲೂ ಸೂರ್ಯ ದೇವಾಲಯಗಳು ಸಹ ಎಎಸ್‌ಐ ಸಂರಕ್ಷಿತ ದೇವಾಲಯಗಳಾಗಿವೆ ಹಾಗೂ ಇಲ್ಲಿನ ಸೂರ್ಯ ದೇವಾಲಯಗಳಲ್ಲಿ ಪೂಜೆ ಮಾಡಲಾಗುತ್ತದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ