LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಮ್ಮುಕಾಶ್ಮೀರ, ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಸಾಧ್ಯತೆ!


ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಆಯೋಗವು ಮಧ್ಯಾಹ್ನ 3 ಗಂಟೆಗೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ನಡೆಸಲಿದೆ ಎಂದು ಮಾಧ್ಯಮಗಳಿಗೆ ತನ್ನ ಆಹ್ವಾನದಲ್ಲಿ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


ಹರಿಯಾಣ ಮತ್ತು ಮಹಾರಾಷ್ಟ್ರದ ಶಾಸಕಾಂಗ ಸಭೆಗಳ ಅವಧಿಯು ಕ್ರಮವಾಗಿ ನವೆಂಬರ್ 3 ಮತ್ತು ನವೆಂಬರ್ 26ರಂದು ಕೊನೆಗೊಳ್ಳಲಿದೆ. ಜೊತೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಸಪ್ಟೆಂಬರ್​ 30ರೊಳಗೆ ವಿಧಾನಸಭಾ ಚುನಾವಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿದೆ. ಅದರಂತೆ ಸೆಪ್ಟೆಂಬರ್ 30ರೊಳಗೆ ಚುನಾವಣೆ ನಡೆಸಲು ಚುನಾವಣಾ ಸಮಿತಿ ನಿರ್ಧರಿಸಿದೆ.


ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಹಾಗೂ ಎಸ್ಎಸ್ ಸಂಧು ಅವರು ಶ್ರೀನಗರ ಮತ್ತು ಜಮ್ಮುವಿನಲ್ಲಿ ರಾಜಕೀಯ ಪಕ್ಷಗಳು, ಉಪ ಆಯುಕ್ತರು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಯುತ್ತಿದೆ.





ಚುನಾವಣಾ ಆಯೋಗವು ಬುಧವಾರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗೆ ಸಭೆ ನಡೆಸಿತ್ತು. ಅಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತ್ತು ಚುನಾವಣೆಯ ಸಮಯದಲ್ಲಿ ಸಾಕಷ್ಟು ಭದ್ರತೆ ಒದಗಿಸಲು ಕೋರಿದೆ. ಅಭ್ಯರ್ಥಿಗಳ ಭದ್ರತೆಗಾಗಿ ಸುಮಾರು 15,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಕೋರಲಾಗಿದೆ.


ಚುನಾವಣಾ ಸಿದ್ಧತೆಯ ಬಗ್ಗೆ ಮೇಲ್ವಿಚಾರಣೆ ಮಾಡಲು ಚುನಾವಣಾ ಆಯೋಗವು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣಕ್ಕೆ ಭೇಟಿ ನೀಡಿತ್ತು. ಆದರೆ, ಇನ್ನೂ ಮಹಾರಾಷ್ಟ್ರಕ್ಕೆ ಭೇಟಿ ನೀಡಿಲ್ಲ. ಹಾಗಾಗಿ, ಯಾವ ಯಾವ ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎನ್ನುವುದರ ಬಗ್ಗೆ ಕುತೂಹಲ ಇದೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ