Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಹಾ ಕೊಲೆ ಪ್ರಕರಣ ಖಂಡಿಸಿ ಬೇಡ ಜಂಗಮ ಮಹಾಸಭಾ ಪ್ರತಿಭಟನೆ




ಕುಕನೂರು,23: ಪಟ್ಟಣದಲ್ಲಿ ಹುಬ್ಬಳ್ಳಿ ನಗರದಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಕರ್ನಾಟಕ ಬೇಡ ಜಂಗಮ ಮಹಾಸಭಾ ಹಾಗೂ ಸಮಸ್ತ ನಾಗರೀಕರ ಸಂಯುಕ್ತಾಶ್ರಯದಲ್ಲಿ ನೇಹಾ ಕೊಲೆಯ ಆರೋಪಿ ಫಯಾಜ್‌ನ್ನು ಎನ್‌ಕೌಂಟರ್‌ನಲ್ಲಿ ಮುಗಿಸಬೇಕು ಅಥವಾ ಗಲ್ಲು ಶಿಕ್ಷೆಯಾಗಬೇಕೆಂದು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮಂಗಳವಾರ ಮನವಿ ಸಲ್ಲಿಸಿದರು.


 ಬೇಡ ಜಂಗಮ ಸಮಾಜದ ತಾಲೂಕಾಧ್ಯಕ್ಷ ಸಿದ್ದಯ್ಯ ಕಳ್ಳಿಮಠ ಮಾತನಾಡಿ, ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನ ಆವರಣದಲ್ಲಿ ಹಾಡುಹಗಲೇ ನೇಹಾ ಹಿರೇಮಠ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಫಯಾಜ್‌ನು ಹತ್ಯೆ ಮಾಡಿದ್ದಾನೆ. ನೇಹಾಗೆ ಒಂಬತ್ತು ಬಾರಿ ಚಾಕುವಿನಿಂದ ಹಿರಿದು ಇದು ಮಾನವರು ತಲೆ ತಗ್ಗಿಸುವಂತಹ ಕೊಲೆಯಾಗಿದೆ.


ನೇಹಾಳ ಪಾಲಕರಿಗೆ, ರಾಜ್ಯದ ಜನರಿಗೆ ಈ ಘಟನೆ ತುಂಬಾ ನೋವು ತರಿಸಿದೆ. ಇಂತಹ ಘಟನೆಗಳು ಯಾವ ಹೆಣ್ಣುಮಕ್ಕಳಿಗೂ ಹಾಗೂ ಪಾಲಕರಿಗೂ ಆಗಬಾರದು ಇದೆ ಕೋನೆಯದಾಗಬೇಕಾದರೆ ಆರೋಪಿತನಿಗೆ ಕೊಡಲೆ ಪೋಲಿಸ್‌ರು ಎನ್‌ಕೌಂಟರ್ ಮಾಡಿ ಹತ್ಯೆ ಮಾಡಬೇಕು ಇಲ್ಲದಿದ್ದರೆ ಗಲ್ಲು ಶಿಕ್ಷೆಯನ್ನು ನೀಡಬೇಕು. ಆರೋಪಿತನಿಗೆ ಶಿಕ್ಷೆಯನ್ನು ನೀಡದಿದ್ದರೆ ಸಂಘಟನೆಗಳಿಂದ ಮುಂದಿನ ದಿನಮಾನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದರು.


ಪಟ್ಟಣದ ಶ್ರೀವೀರಭದ್ರೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ ಮೂಲಕ ವೀರಭದ್ರಪ್ಪ ವೃತ್ತದಲ್ಲಿ ತಹಶೀಲ್ದಾರ್ ಅಶೋಕ ಶಿಗ್ಗಾವಿ ಅವರಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ವೀರಣ್ಣ ಅಣ್ಣಿಗೇರಿ, ದಳಪತಿ ವೀರಯ್ಯ ತೊಂಟದಾರ್ಯಮಠ, ಜಿ.ಪಂ ಮಾಜಿ ಅಧ್ಯಕ್ಷ ರಾಮಣ್ಣ ಭಜಂತ್ರಿ, ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ, ನಗರ ಘಟಕದ ಅಧ್ಯಕ್ಷ ರೇಹಮಾನಸಾಬ ಮಕ್ಕಪ್ಪನವರ್, ರಶೀದಸಾಬ ಹಣಜಗಿರಿ, ರಶೀದಸಾಬ ಮುಭಾರಕ್, ವಜೀರಸಾಬ ತಳಕಲ್, ದೇವಪ್ಪ ಸೊಭಾನದ್, ಮಲ್ಲಿಕಾರ್ಜುನ್ ಕುಡ್ಲೂರು, ಶರಣಯ್ಯ, ಮಲ್ಲಪ್ಪ ಗುತ್ತಿ, ಹಮಾಲರ ಸಂಘದ ಅಧ್ಯಕ್ಷ ನಿಂಗಪ್ಪ ಗೊರ್ಲೆಕೊಪ್ಪ, ಬಸವರಾಜ ಮಂಡಲಗೇರಿ, ಬಸವನಗೌಡ ಮಾಲಿಪಾಟೀಲ್, ಕುಮಾರಸ್ವಾಮಿ ಹಿರೇಮಠ, ಸದಾಶಿವಯ್ಯ ಅರಕೇರಿಮಠ, ಸಿದ್ದಲಿಂಗಯ್ಯ ಚೌಡಿಮಠ, ರಾಜಶೇಖರಯ್ಯ ಶಿರೂರಮಠ, ಕಲ್ಲಯ್ಯ ಹಿರೇಮಠ, ವಿಶ್ವನಾಥ ಕೆಂಬಾವಿಮಠ, ಶೇಖರಯ್ಯ, ಗುದ್ನೇಯ್ಯ, ಮುತ್ತಯ್ಯ, ಸಿದ್ದಲಿಂಗಯ್ಯ ಹಿರೇಮಠ ಸೇರಿದಂತೆ ಇತರರು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ