Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಡಲಸಂಗಮದಲ್ಲೇ ಹೊಸ ಪೀಠ ಕಟ್ಟುವ ಸುಳಿವು ನೀಡಿದ ಜಯಮೃತ್ಯುಂಜಯ ಶ್ರೀ

ಬಾಗಲಕೋಟೆ, ಸೆಪ್ಟೆಂಬರ್ 23: ಕೂಡಲಸಂಗಮದ ಪಂಚಮಸಾಲಿ ಮಹಾಪೀಠಕ್ಕೆ ಬೀಗ ಬಿದ್ದಿದೆ. ಬಸವ ಜಯಮೃತ್ಯುಂಜಯ ಶ್ರೀ   ಉಚ್ಚಾಟನೆ ಬಳಿಕ ನೀರವ ಮೌನ ಆವರಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ಭಾನುವಾರ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್‌ನ ಕಾರ್ಯಕಾರಿಣಿ ಜಯಮೃತ್ಯುಂಜಯ ಶ್ರೀಗಳನ್ನು ಉಚ್ಚಾಟಿಸಿ ನಿರ್ಧಾರ ಪ್ರಕಟಿಸಿತ್ತು. ಸ್ವಾಭಿಮಾನವಿದ್ದರೆ ಸ್ವಾಮೀಜಿ ಪೀಠದ ಕಡೆ ಬರಬಾರದೆಂದು ಟ್ರಸ್ಟ್‌ನ ಅಧ್ಯಕ್ಷ ಕಾಶಪ್ಪನವರ್‌ ಹೇಳಿದ್ದರು.

ಉಚ್ಚಾಟನೆ ಬಳಿಕ ಶ್ರೀಗಳು ಕೂಡಲಸಂಗಮಕ್ಕೆ ಧಾವಿಸಿದ್ದಾರೆ. ಆದರೆ, ಸ್ವಾಮೀಜಿಗೆ ಸಭೆ ನಡೆಸಲು ಎಲ್ಲೂ ಅವಕಾಶ ಸಿಗಲಿಲ್ಲ. ಕಾಶಪ್ಪನವರ ಪರೋಕ್ಷ ಸೂಚನೆಯಿಂದಾಗಿ ಎಲ್ಲೂ ಹಾಲ್‌ಗಳನ್ನು ನೀಡಿಲ್ಲ. ಹಾಗಾಗಿ, ಆಲದಮರದ ಕೆಳಗೆ ಭಕ್ತರ ಜತೆ ಶ್ರೀಗಳು ಸಭೆ ನಡೆಸಿದ್ದು, ಈ ವೇಳೆ ಭಾವುಕರಾದರು.

ಈ ಮಧ್ಯೆ, ಶ್ರೀಗಳ ಉಚ್ಚಾಟನೆ ಬಗ್ಗೆ ದಾವಣಗೆರೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಭಕ್ತರು, ಸಮುದಾಯದ ಮುಖಂಡರ ಜತೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಕೂಡಲಸಂಗಮದಲ್ಲೇ ಹೊಸ ಪೀಠ ಕಟ್ಟುವ ಬಗ್ಗೆ ಮಾತಾಡಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭಾನುವಾರ ಉಚ್ಚಾಟನೆ ಮಾಡಲಾಗಿತ್ತು. ಇದರ ಬೆನ್ನಲ್ಲೇ, ಪಂಚಮಸಾಲಿ ಟ್ರಸ್ಟ್‌ ವಿರುದ್ಧ ಬಸವ ಜಯಮೃತ್ಯುಂಜಯ ಶ್ರೀ ಗುಡುಗಿದ್ದಾರೆ. ತಮ್ಮನ್ನು ಉಚ್ಟಾಟಿಸುವ ಅಧಿಕಾರ ಯಾರಿಗೂ ಇಲ್ಲ ಎಂದಿದ್ದಾರೆ. ಭಕ್ತರ ಜತೆ ಕೂಡಲಸಂಗಮದಲ್ಲೇ ಕಣ್ಣೀರಿಟ್ಟಿದ್ದಾರೆ. ಹೊಸ ಪೀಠ ಕಟ್ಟುವುದಾಗಿ ಹೇಳಿಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ