Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಡಲಸಂಗಮದಲ್ಲೇ ಹೊಸ ಪೀಠ ಕಟ್ಟುವ ಸುಳಿವು ನೀಡಿದ ಜಯಮೃತ್ಯುಂಜಯ ಶ್ರೀ

ಬಾಗಲಕೋಟೆ, ಸೆಪ್ಟೆಂಬರ್ 23: ಕೂಡಲಸಂಗಮದ ಪಂಚಮಸಾಲಿ ಮಹಾಪೀಠಕ್ಕೆ ಬೀಗ ಬಿದ್ದಿದೆ. ಬಸವ ಜಯಮೃತ್ಯುಂಜಯ ಶ್ರೀ   ಉಚ್ಚಾಟನೆ ಬಳಿಕ ನೀರವ ಮೌನ ಆವರಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ಭಾನುವಾರ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್‌ನ ಕಾರ್ಯಕಾರಿಣಿ ಜಯಮೃತ್ಯುಂಜಯ ಶ್ರೀಗಳನ್ನು ಉಚ್ಚಾಟಿಸಿ ನಿರ್ಧಾರ ಪ್ರಕಟಿಸಿತ್ತು. ಸ್ವಾಭಿಮಾನವಿದ್ದರೆ ಸ್ವಾಮೀಜಿ ಪೀಠದ ಕಡೆ ಬರಬಾರದೆಂದು ಟ್ರಸ್ಟ್‌ನ ಅಧ್ಯಕ್ಷ ಕಾಶಪ್ಪನವರ್‌ ಹೇಳಿದ್ದರು.

ಉಚ್ಚಾಟನೆ ಬಳಿಕ ಶ್ರೀಗಳು ಕೂಡಲಸಂಗಮಕ್ಕೆ ಧಾವಿಸಿದ್ದಾರೆ. ಆದರೆ, ಸ್ವಾಮೀಜಿಗೆ ಸಭೆ ನಡೆಸಲು ಎಲ್ಲೂ ಅವಕಾಶ ಸಿಗಲಿಲ್ಲ. ಕಾಶಪ್ಪನವರ ಪರೋಕ್ಷ ಸೂಚನೆಯಿಂದಾಗಿ ಎಲ್ಲೂ ಹಾಲ್‌ಗಳನ್ನು ನೀಡಿಲ್ಲ. ಹಾಗಾಗಿ, ಆಲದಮರದ ಕೆಳಗೆ ಭಕ್ತರ ಜತೆ ಶ್ರೀಗಳು ಸಭೆ ನಡೆಸಿದ್ದು, ಈ ವೇಳೆ ಭಾವುಕರಾದರು.

ಈ ಮಧ್ಯೆ, ಶ್ರೀಗಳ ಉಚ್ಚಾಟನೆ ಬಗ್ಗೆ ದಾವಣಗೆರೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಭಕ್ತರು, ಸಮುದಾಯದ ಮುಖಂಡರ ಜತೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಕೂಡಲಸಂಗಮದಲ್ಲೇ ಹೊಸ ಪೀಠ ಕಟ್ಟುವ ಬಗ್ಗೆ ಮಾತಾಡಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭಾನುವಾರ ಉಚ್ಚಾಟನೆ ಮಾಡಲಾಗಿತ್ತು. ಇದರ ಬೆನ್ನಲ್ಲೇ, ಪಂಚಮಸಾಲಿ ಟ್ರಸ್ಟ್‌ ವಿರುದ್ಧ ಬಸವ ಜಯಮೃತ್ಯುಂಜಯ ಶ್ರೀ ಗುಡುಗಿದ್ದಾರೆ. ತಮ್ಮನ್ನು ಉಚ್ಟಾಟಿಸುವ ಅಧಿಕಾರ ಯಾರಿಗೂ ಇಲ್ಲ ಎಂದಿದ್ದಾರೆ. ಭಕ್ತರ ಜತೆ ಕೂಡಲಸಂಗಮದಲ್ಲೇ ಕಣ್ಣೀರಿಟ್ಟಿದ್ದಾರೆ. ಹೊಸ ಪೀಠ ಕಟ್ಟುವುದಾಗಿ ಹೇಳಿಕೊಂಡಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*