Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಡಲಸಂಗಮದಲ್ಲೇ ಹೊಸ ಪೀಠ ಕಟ್ಟುವ ಸುಳಿವು ನೀಡಿದ ಜಯಮೃತ್ಯುಂಜಯ ಶ್ರೀ

ಬಾಗಲಕೋಟೆ, ಸೆಪ್ಟೆಂಬರ್ 23: ಕೂಡಲಸಂಗಮದ ಪಂಚಮಸಾಲಿ ಮಹಾಪೀಠಕ್ಕೆ ಬೀಗ ಬಿದ್ದಿದೆ. ಬಸವ ಜಯಮೃತ್ಯುಂಜಯ ಶ್ರೀ   ಉಚ್ಚಾಟನೆ ಬಳಿಕ ನೀರವ ಮೌನ ಆವರಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ಭಾನುವಾರ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್‌ನ ಕಾರ್ಯಕಾರಿಣಿ ಜಯಮೃತ್ಯುಂಜಯ ಶ್ರೀಗಳನ್ನು ಉಚ್ಚಾಟಿಸಿ ನಿರ್ಧಾರ ಪ್ರಕಟಿಸಿತ್ತು. ಸ್ವಾಭಿಮಾನವಿದ್ದರೆ ಸ್ವಾಮೀಜಿ ಪೀಠದ ಕಡೆ ಬರಬಾರದೆಂದು ಟ್ರಸ್ಟ್‌ನ ಅಧ್ಯಕ್ಷ ಕಾಶಪ್ಪನವರ್‌ ಹೇಳಿದ್ದರು.

ಉಚ್ಚಾಟನೆ ಬಳಿಕ ಶ್ರೀಗಳು ಕೂಡಲಸಂಗಮಕ್ಕೆ ಧಾವಿಸಿದ್ದಾರೆ. ಆದರೆ, ಸ್ವಾಮೀಜಿಗೆ ಸಭೆ ನಡೆಸಲು ಎಲ್ಲೂ ಅವಕಾಶ ಸಿಗಲಿಲ್ಲ. ಕಾಶಪ್ಪನವರ ಪರೋಕ್ಷ ಸೂಚನೆಯಿಂದಾಗಿ ಎಲ್ಲೂ ಹಾಲ್‌ಗಳನ್ನು ನೀಡಿಲ್ಲ. ಹಾಗಾಗಿ, ಆಲದಮರದ ಕೆಳಗೆ ಭಕ್ತರ ಜತೆ ಶ್ರೀಗಳು ಸಭೆ ನಡೆಸಿದ್ದು, ಈ ವೇಳೆ ಭಾವುಕರಾದರು.

ಈ ಮಧ್ಯೆ, ಶ್ರೀಗಳ ಉಚ್ಚಾಟನೆ ಬಗ್ಗೆ ದಾವಣಗೆರೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಭಕ್ತರು, ಸಮುದಾಯದ ಮುಖಂಡರ ಜತೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಕೂಡಲಸಂಗಮದಲ್ಲೇ ಹೊಸ ಪೀಠ ಕಟ್ಟುವ ಬಗ್ಗೆ ಮಾತಾಡಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭಾನುವಾರ ಉಚ್ಚಾಟನೆ ಮಾಡಲಾಗಿತ್ತು. ಇದರ ಬೆನ್ನಲ್ಲೇ, ಪಂಚಮಸಾಲಿ ಟ್ರಸ್ಟ್‌ ವಿರುದ್ಧ ಬಸವ ಜಯಮೃತ್ಯುಂಜಯ ಶ್ರೀ ಗುಡುಗಿದ್ದಾರೆ. ತಮ್ಮನ್ನು ಉಚ್ಟಾಟಿಸುವ ಅಧಿಕಾರ ಯಾರಿಗೂ ಇಲ್ಲ ಎಂದಿದ್ದಾರೆ. ಭಕ್ತರ ಜತೆ ಕೂಡಲಸಂಗಮದಲ್ಲೇ ಕಣ್ಣೀರಿಟ್ಟಿದ್ದಾರೆ. ಹೊಸ ಪೀಠ ಕಟ್ಟುವುದಾಗಿ ಹೇಳಿಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ