LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಮಡಗಾಸ್ಕರ್ ದೇಶದಲ್ಲಿ ಜೆನ್​​ ಝೀ ಆಕ್ರೋಶ​; ಹಿಂಸಾಚಾರದಲ್ಲಿ 22 ಮಂದಿ ಸಾವು

ಅಂಟಾನನರಿವೋ(ಮಡಗಾಸ್ಕರ್): ನೇಪಾಳದ ಬಳಿಕ ಪುಟ್ಟ ದ್ವೀಪ ದೇಶ ಮಡಗಾಸ್ಕರ್ ಜೆನ್​ ಝಿ ಪ್ರತಿಭಟನೆಗೆ ನಲುಗಿದ್ದು, ಅಲ್ಲಿನ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಲವೆಡೆ ನಡೆದ ಪ್ರತಿಭಟನೆಗಳಲ್ಲಿ ಇಲ್ಲಿವರೆಗೆ 22 ಜನರು ಸಾವನ್ನಪ್ಪಿದ್ದಾರೆ ಮತ್ತು 100ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಅಧಿಕಾರಿಗಳು ತಿಳಿಸಿದ್ದಾರೆ.


ಕಾರಣವೇನು?: ದೇಶದಲ್ಲಿ ಕಳೆದ ಗುರುವಾರದಿಂದ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯುತ್​ ಮತ್ತು ನೀರಿನ ಪೂರೈಕೆಯಲ್ಲಾದ ವ್ಯತ್ಯಯಕ್ಕೆ ಆಕ್ರೋಶ ಶುರುವಾಗಿತ್ತು. ಶಾಂತಿಯುತವಾಗಿ ಆರಂಭಗೊಂಡ ಪ್ರತಿಭಟನೆಗಳು ಕ್ರಮೇಣ ಹಿಂಸಾಚಾರಕ್ಕೆ ತಿರುಗಿವೆ. ಸರ್ಕಾರದ ವೈಫಲ್ಯದ ವಿರುದ್ಧ ಯುವಜನತೆ ತೀವ್ರ ಆಕ್ರೋಶ ಹೊರಹಾಕಿದ್ದು, ದೇಶದಲ್ಲಿ ಹೊಸ ಚುನಾವಣೆ ನಡೆಸಲೇಬೇಕೆಂದು ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.


ಈ ಪ್ರತಿಭಟನೆಗಳ ಬೆನ್ನಲ್ಲೇ ಅಧ್ಯಕ್ಷ ರಾಜೋಲಿನಾ ಅವರು ಭಾನುವಾರ ಇಂಧನ ಸಚಿವರನ್ನು ವಜಾಗೊಳಿಸಿದ್ದಾರೆ. ಇದೇ ವೇಳೆ, ಅಂಟಾನನರಿವೊಗೆ ಭೇಟಿ ನೀಡಿದ್ದು, ಜನಜೀವನವನ್ನು ರಕ್ಷಿಸುವ ಮತ್ತು ಸುಧಾರಿಸುವ ಕುರಿತು ಭರವಸೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್