Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತರು ಸಮಾಜ ಕಾಪಾಡುವ ನಿಟ್ಟಿನಲ್ಲಿ ವರದಿಗಳನ್ನು ಮಾಡಬೇಕು: ಡಾ ಬಾಳಾಸಾಬ ಲೋಕಾಪುರ

ಅಥಣಿ : ಪತ್ರಕರ್ತರು ಸಮಾಜದ ಸ್ವಾಸ್ತ ಕಾಪಾಡುವ ನಿಟ್ಟಿನಲ್ಲಿ ವರದಿಗಳನ್ನು ಮಾಡಬೇಕು, ಜನಪರವಾದ ವರದಿಗಳ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶಗಳನ್ನು ನೀಡಬೇಕು ಎಂದು ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ ಬಾಳಾಸಾಬ ಲೋಕಾಪುರ ಅವರು ಹೇಳಿದರು.


ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘ ಅಥಣಿ ವತಿಯಿಂದ ಪತ್ರಕರ್ತರ ದಿನಾಚರಣೆ ನಿಮಿತ್ತ  ಸಸಿ ನೆಡುವ ಮೂಲಕ ಪತ್ರಿಕಾ ದಿನಾಚರಣೆ ಆಚರಣೆ ಮಾಡಿ ಮಾತನಾಡಿ ಸಮಾಜದಲ್ಲಿ ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾದ ಪತ್ರಿಕೋದ್ಯಮ ಸಮಾಜವನ್ನ ಸರಿಯಾದ ದಾರಿಯತ್ತ ಕೊಂಡೊಯ್ಯಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕು‌, ಸಮಾಜದ ಅಂಕು ಡೊಂಕು ತಿದ್ದುತ್ತಾ ಸಾಮನ್ಯ ಜನರಿಗೆ ನ್ಯಾಯ ದೊರಕಿಸಿ ಕೊಡುವ ಒಂದು ಪ್ರಯತ್ನ ಈ ಪತ್ರಿಕೆಗಳ ಮೂಲಕ ಪತ್ರಕರ್ತರು ಮಾಡುವ ಒಂದು ಅದ್ಭುತ ಕೆಲಸವಾಗಿದೆ ಎಂದು ಹೇಳಿದರು.


ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ಪರಶುರಾಮ ನಂದೇಶ್ವರ, ಉಪಾಧ್ಯಕ್ಷ ರಮೇಶ ಬಾದವಾಡಗಿ, ಕಾರ್ಯದರ್ಶಿ ಶಿವಕುಮಾರ ಅಪರಾಜ ಖಜಾಂಚಿ ಅಜೀತ ಕಾಂಬಳೆ, ಹಿರಿಯ ಪತ್ರಕರ್ತ ಅಣ್ಣಾಸಾಬ ತೆಲಸಂಗ, ರಾಜು ಗಾಲಿ, ವಿಜಯ ಅಡ್ಡಹಳ್ಳಿ, ಡಾ.ರಾಮಣ್ಣಾ ದೊಡ್ಡನಿಂಗಪ್ಪಗೊಳ, ರಾಕೇಶ ಮೈಗೂರ, ಸಂತೋಷ ಬಡಕಂಬಿ,ವಿಲಾಸ್ ಕಾಂಬಳೆ,ಜಬ್ಬಾರ ಚಿಚಲಿ,ಸಂದೀಪ ಘಟಕಾಂಬಳೆ,ಶೇಖರ ತೆವರಟ್ಟಿ,ಕ್ಲಪ್ಪಾ ಕನ್ನಾಳ,ಶಿವಾನಂದ ಪುಜಾರಿ ಸೇರಿದಂತೆ ಅನೇಕರು ಉಪಸ್ಥಿತಿ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ