Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸುವವರೇ ನಿಜವಾದ ಹೀರೋ: ನ್ಯಾಯಾಧೀಶೆ ಕೆ.ಜಿ ಶಾಂತಿ

ಬಳ್ಳಾರಿ,02 -ರಸ್ತೆ ಸಂಚಾರಿ ನಿಯಮಗಳನ್ನು ಪಾಲನೆ ಮಾಡುವ ಮೂಲಕ ವಾಹನ ಚಾಲನೆ ಮಾಡುವವರೇ ನಿಜವಾದ ಹೀರೋಗಳಾಗುತ್ತಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಜಿ ಶಾಂತಿ ಅವರು ಹೇಳಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 37 ನೇ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದಿನನಿತ್ಯ ಬಳಸುವ ರಸ್ತೆಯಲ್ಲಿ ಪ್ರತಿಯೊಬ್ಬರ ಜೀವನ ಅಡಗಿದ್ದು, ಜಾಗರೂಕರಾಗಿ ವಾಹನ ಚಲಾಯಿಸಬೇಕು. ರಸ್ತೆ ನಿಯಮ ಉಲ್ಲಂಘಿಸಿ, ಸಿಗ್ನಲ್ ಜಂಪ್ ಮಾಡಿ ಪೊಲೀಸರ ಕಣ್ಣು ತಪ್ಪಿಸಿ ಚಲಾಯಿಸುವುದು ಸಾಹಸವಲ್ಲ; ಬದಲಾಗಿ ನಿಯಮ ಪಾಲಿಸಿ ವಾಹನ ಚಲಾಯಿಸಿದರೆ ಮಾತ್ರ ಸುರಕ್ಷಿತರಾಗಿ ಮನೆಗೆ ಸೇರಬಹುದು ಎಂದರು.
18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾಯಿಸಲು ನೀಡಿದಲ್ಲಿ ಮಕ್ಕಳ ಪೋಷಕರ ವಿರುದ್ಧ ಪ್ರಕರಣ ಮತ್ತು 25,000 ಸಾವಿರ ದಂಡವಿದೆ. ಚಾಲನಾ ಪರವಾನಿಗೆ ಇಲ್ಲದೇ ವಾಹನ ಚಲಾಯಿಸುವಂತಿಲ್ಲ. ಈ ಕುರಿತು ಪ್ರತಿಯೊಬ್ಬರೂ ಎಚ್ಚರವಹಿಸಬೇಕು. 5 ಬಾರಿಗಿಂತ ಪ್ರಕರಣ ದಾಖಲಾದಲ್ಲಿ ಅಂತಹವರ ಚಾಲನಾ ಪರವಾನಿಗೆ ಶ್ವಾಶತವಾಗಿ ರದ್ದುಪಡಿಸುವ ಕಾನೂನಿದೆ ಎಂದು ತಿಳಿಸಿದರು.
ರಸ್ತೆ ಅಪಘಾತಗಳು ಅಪಾಯಕಾರಿಯಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಲು ಜನವರಿ ಮಾಸಾದ್ಯಂತ ಜಿಲ್ಲೆಯಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದೆಯೂ ನಿರಂತರವಾಗಿ ಪಾಲಿಸಿದಲ್ಲಿ ಮಾತ್ರ ಈ ಮಾಸಾಚರಣೆಯು ಅರ್ಥಪೂರ್ಣವಾಗಲಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸುರಕ್ಷತೆಯು ಮೊದಲ ಆದ್ಯತೆಯಾಗಬೇಕು. ಅದು ರಸ್ತೆ ಸುರಕ್ಷತೆಯಾಗಿರಬೇಕು. ಬದಲಾವಣೆ ನಮ್ಮಿಂದ ಮಾತ್ರ ಸಾಧ್ಯವಾಗಿದ್ದು, ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದರು.
ಆಡುಭಾಷೆಯAತೆ ‘ಅತಿ ವೇಗ-ತಿಥಿ ಬೇಗ’ ಎನ್ನುವ ಹಾಗೆ ಅತಿವೇಗದ ಚಾಲನೆ ನಮ್ಮ ಪ್ರಾಣಕ್ಕೆ ಕುತ್ತು ತರಲಿದ್ದು, ಇದನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ನಿಧಾನವಾಗಿ ಚಾಲನೆ ಮಾಡಬೇಕು. ಜೀವ ಮತ್ತು ಜೀವನ ಅಮೂಲ್ಯವಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಶಿಸ್ತು ಅಳವಡಿಸಿಕೊಂಡು ವಾಹನ ಚಲಾಯಿಸೋಣ ಎಂದು ತಿಳಿಸಿದರು.
ರಸ್ತೆ ಅಪಘಾತ ಸಂದರ್ಭದಲ್ಲಿ ತಪ್ಪದೇ ಸಹಾಯ ಹಸ್ತ ನೀಡಬೇಕು. ಅಂತಹವರನ್ನು ಪ್ರಥಮವಾಗಿ ಆಸ್ಪತ್ರೆಗೆ ಸೇರಿಸಬೇಕು. ಆ ಸಂದರ್ಭದಲ್ಲಿ ಯಾವುದೇ ತಮ್ಮ ಮಾಹಿತಿಯನ್ನು ನೀಡುವುದು ಅಗತ್ಯವಿಲ್ಲ. ಆಸ್ಪತ್ರೆ ಮತ್ತು ಪೊಲೀಸ್ ಸಿಬ್ಬಂದಿ ಮಾಹಿತಿ ಪಡೆಯುವಂತಿಲ್ಲ. ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಈ ಕಾನೂನುನನ್ನು ಜಾರಿಗೊಳಿಸಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಜ್ಮಾ. ಡಿ.ಪೆನ್ನೇಕರ್ ಅವರು ಮಾತನಾಡಿ, ರಸ್ತೆ ಪಾದಾಚಾರಿಗಳು ಸಹ ಜಾಗ್ರತೆಯಿಂದ ರಸ್ತೆ ಸಂಚಾರ ನಿಮಯಗಳನ್ನು ಪಾಲಿಸಬೇಕಿದೆ. ಅವಘಡ ಯಾವ ರೀತಿಯಲ್ಲಾದರೂ ಸಂಭವಿಸಬಹುದಾಗಿದೆ. ರಸ್ತೆ ನಿಮಯ, ಸಂಚಾರಿ ಚಿಹ್ನೆಗಳನ್ನು ಅರಿತುಕೊಳ್ಳುವುದು ಅತ್ಯಗತ್ಯವಾಗಿದೆ. ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಬೆಲ್ಟ್ ಕಟ್ಟಿಕೊಳ್ಳಬೇಕು. ಚಾಲನೆ ವೇಳೆ ಮೊಬೈಲ್ ಫೋನ್ ಬಳಸಬಾರದು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಮುಖ್ಯ ರಸ್ತೆ ಸಂಚಾರ ನಿಯಮಗಳನ್ನು ಕೈ ಸನ್ನೆಯ ಮೂಲಕ ಸಾರ್ವಜನಿಕರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಕುರಿತಾದ ಭಿತ್ತಿಪತ್ರ ಅನಾವರಣಗೊಳಿಸಿದರು. ರಸ್ತೆ ಸುರಕ್ಷತೆ ಜಾಗೃತಿಯ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು.
ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ಪ್ರಭಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಸೇರಿದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಅಧಿಕಾರಿಗಳು, ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ಆಟೋ, ಲಾರಿ ಸಂಘದ ಪದಾಧಿಕಾರಿಗಳು, ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ