Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ


ನವದೆಹಲಿ: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದರು.


ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ, ಸುಪ್ರೀಂ ಕೋರ್ಟ್ ಮಾಜಿ​​ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಬಳಿಕ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ನೇಮಕಗೊಂಡ ನ್ಯಾಯಮೂರ್ತಿ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.


ಪ್ರಮಾಣ ವಚನ ಸ್ವೀಕರಿಸಿರುವ ಗವಾಯಿ ಅವರು ಇನ್ನೂ 6 ತಿಂಗಳ ಕಾಲ ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿರಲಿದ್ದರೆ. ನವೆಂಬರ್ 23, 2025 ರಂದು ಅವರು ನಿವೃತ್ತಿ ಹೊಂದಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷ ಜಗದೀಪ್ ಧನಕರ್, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ನ್ಯಾಯಮೂರ್ತಿ ಗವಾಯಿ ಅವರ ಕುಟುಂಬ ಸದಸ್ಯರು, ಮಾಜಿ ಸಿಜೆಐ ಸಂಜೀವ್ ಖನ್ನಾ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಭಾಗವಹಿಸಿದ್ದರು.


ಗವಾಯಿ ಅವರ ಹಿನ್ನೆಲೆ: ನ್ಯಾಯಮೂರ್ತಿ ಗವಾಯಿ ಅವರು ಬಿಹಾರ, ಕೇರಳ ಮತ್ತು ಸಿಕ್ಕಿಂನ ಮಾಜಿ ರಾಜ್ಯಪಾಲರು ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಗವಾಯಿ ಬಣ) ಹಿರಿಯ ನಾಯಕ ದಿವಂಗತ ಆರ್.ಎಸ್. ಗವಾಯಿ ಅವರ ಪುತ್ರ. ಅವರು ನವೆಂಬರ್ 24, 1960ರಂದು ಅಮರಾವತಿಯಲ್ಲಿ ಜನಿಸಿದರು. ಮಾರ್ಚ್ 16, 1985ರಂದು ವಕೀಲ ವೃತ್ತಿ ಆರಂಭಿಸಿದ ಅವರು 1987ರಿಂದ 1990ರ ವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ, 1990ರ ನಂತರ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದೆದುರು ವೃತ್ತಿ ಅಭ್ಯಾಸ ಮಾಡಿದರು.


ನಾಗ್ಪುರ ಪುರಸಭೆ, ಅಮರಾವತಿ ಪುರಸಭೆ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರೂ ಆಗಿದ್ದರು. ಜತೆಗೆ SICOM, DCVL, ಇತ್ಯಾದಿ ವಿವಿಧ ಸ್ವಾಯತ್ತ ಸಂಸ್ಥೆಗಳು ಮತ್ತು ನಿಗಮಗಳು ಮತ್ತು ವಿದರ್ಭ ಪ್ರದೇಶದ ವಿವಿಧ ಪುರಸಭೆಗಳಿಗೆ ನಿಯಮಿತವಾಗಿ ಹಾಜರಾಗುತ್ತಿದ್ದರು.












Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ