Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ


ನವದೆಹಲಿ: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದರು.


ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ, ಸುಪ್ರೀಂ ಕೋರ್ಟ್ ಮಾಜಿ​​ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಬಳಿಕ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ನೇಮಕಗೊಂಡ ನ್ಯಾಯಮೂರ್ತಿ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.


ಪ್ರಮಾಣ ವಚನ ಸ್ವೀಕರಿಸಿರುವ ಗವಾಯಿ ಅವರು ಇನ್ನೂ 6 ತಿಂಗಳ ಕಾಲ ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿರಲಿದ್ದರೆ. ನವೆಂಬರ್ 23, 2025 ರಂದು ಅವರು ನಿವೃತ್ತಿ ಹೊಂದಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷ ಜಗದೀಪ್ ಧನಕರ್, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ನ್ಯಾಯಮೂರ್ತಿ ಗವಾಯಿ ಅವರ ಕುಟುಂಬ ಸದಸ್ಯರು, ಮಾಜಿ ಸಿಜೆಐ ಸಂಜೀವ್ ಖನ್ನಾ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಭಾಗವಹಿಸಿದ್ದರು.


ಗವಾಯಿ ಅವರ ಹಿನ್ನೆಲೆ: ನ್ಯಾಯಮೂರ್ತಿ ಗವಾಯಿ ಅವರು ಬಿಹಾರ, ಕೇರಳ ಮತ್ತು ಸಿಕ್ಕಿಂನ ಮಾಜಿ ರಾಜ್ಯಪಾಲರು ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಗವಾಯಿ ಬಣ) ಹಿರಿಯ ನಾಯಕ ದಿವಂಗತ ಆರ್.ಎಸ್. ಗವಾಯಿ ಅವರ ಪುತ್ರ. ಅವರು ನವೆಂಬರ್ 24, 1960ರಂದು ಅಮರಾವತಿಯಲ್ಲಿ ಜನಿಸಿದರು. ಮಾರ್ಚ್ 16, 1985ರಂದು ವಕೀಲ ವೃತ್ತಿ ಆರಂಭಿಸಿದ ಅವರು 1987ರಿಂದ 1990ರ ವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ, 1990ರ ನಂತರ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದೆದುರು ವೃತ್ತಿ ಅಭ್ಯಾಸ ಮಾಡಿದರು.


ನಾಗ್ಪುರ ಪುರಸಭೆ, ಅಮರಾವತಿ ಪುರಸಭೆ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರೂ ಆಗಿದ್ದರು. ಜತೆಗೆ SICOM, DCVL, ಇತ್ಯಾದಿ ವಿವಿಧ ಸ್ವಾಯತ್ತ ಸಂಸ್ಥೆಗಳು ಮತ್ತು ನಿಗಮಗಳು ಮತ್ತು ವಿದರ್ಭ ಪ್ರದೇಶದ ವಿವಿಧ ಪುರಸಭೆಗಳಿಗೆ ನಿಯಮಿತವಾಗಿ ಹಾಜರಾಗುತ್ತಿದ್ದರು.












Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ