Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಪ್ರಮಾಣ ವಚನ


ನವದೆಹಲಿ: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದರು.


ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ, ಸುಪ್ರೀಂ ಕೋರ್ಟ್ ಮಾಜಿ​​ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಬಳಿಕ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ನೇಮಕಗೊಂಡ ನ್ಯಾಯಮೂರ್ತಿ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.


ಪ್ರಮಾಣ ವಚನ ಸ್ವೀಕರಿಸಿರುವ ಗವಾಯಿ ಅವರು ಇನ್ನೂ 6 ತಿಂಗಳ ಕಾಲ ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿರಲಿದ್ದರೆ. ನವೆಂಬರ್ 23, 2025 ರಂದು ಅವರು ನಿವೃತ್ತಿ ಹೊಂದಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷ ಜಗದೀಪ್ ಧನಕರ್, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ನ್ಯಾಯಮೂರ್ತಿ ಗವಾಯಿ ಅವರ ಕುಟುಂಬ ಸದಸ್ಯರು, ಮಾಜಿ ಸಿಜೆಐ ಸಂಜೀವ್ ಖನ್ನಾ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಭಾಗವಹಿಸಿದ್ದರು.

Advertisement

ಗವಾಯಿ ಅವರ ಹಿನ್ನೆಲೆ: ನ್ಯಾಯಮೂರ್ತಿ ಗವಾಯಿ ಅವರು ಬಿಹಾರ, ಕೇರಳ ಮತ್ತು ಸಿಕ್ಕಿಂನ ಮಾಜಿ ರಾಜ್ಯಪಾಲರು ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಗವಾಯಿ ಬಣ) ಹಿರಿಯ ನಾಯಕ ದಿವಂಗತ ಆರ್.ಎಸ್. ಗವಾಯಿ ಅವರ ಪುತ್ರ. ಅವರು ನವೆಂಬರ್ 24, 1960ರಂದು ಅಮರಾವತಿಯಲ್ಲಿ ಜನಿಸಿದರು. ಮಾರ್ಚ್ 16, 1985ರಂದು ವಕೀಲ ವೃತ್ತಿ ಆರಂಭಿಸಿದ ಅವರು 1987ರಿಂದ 1990ರ ವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ, 1990ರ ನಂತರ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದೆದುರು ವೃತ್ತಿ ಅಭ್ಯಾಸ ಮಾಡಿದರು.


ನಾಗ್ಪುರ ಪುರಸಭೆ, ಅಮರಾವತಿ ಪುರಸಭೆ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರೂ ಆಗಿದ್ದರು. ಜತೆಗೆ SICOM, DCVL, ಇತ್ಯಾದಿ ವಿವಿಧ ಸ್ವಾಯತ್ತ ಸಂಸ್ಥೆಗಳು ಮತ್ತು ನಿಗಮಗಳು ಮತ್ತು ವಿದರ್ಭ ಪ್ರದೇಶದ ವಿವಿಧ ಪುರಸಭೆಗಳಿಗೆ ನಿಯಮಿತವಾಗಿ ಹಾಜರಾಗುತ್ತಿದ್ದರು.












Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*