Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯವಸಾಯದ ಸಮಸ್ಯೆ ಸಾರುವ ಕಬಂಧ ಲಿರಿಕಲ್ ಸಾಂಗ್ ರಿಲೀಸ್ 







     ಕುಂಜಾರ ಫಿಲಂಸ್ ಲಾಂಛನದಲ್ಲಿ ಸಿದ್ದಗೊಂಡಿರುವ ’ಕಬಂಧ’ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.


      ಕೆ.ಕಲ್ಯಾಣ್ ಸಾಹಿತ್ಯ, ಸಾನಿತೇಜ್ ಸಂಗೀತದಲ್ಲಿ ವಾಸುಕಿವೈಭವ್ ಧ್ವನಿಯಾಗಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಸತ್ಯನಾಥ್ ಮಾತನಾಡಿ "ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯಾದ್ಯಂತ ಭಯ ಹುಟ್ಟಿಸಿತ್ತು. ಇದನ್ನೆ ಬಳಸಿಕೊಂಡು ಒಂದಷ್ಟು ಹಾರರ್ ರೂಪಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ.


ಅದರಲ್ಲೂ ವ್ಯವಸಾಯದ ಸಮಸ್ಯೆ ನಮಗೆ ಗೊತ್ತಿಲ್ಲದೆ ತುಂಬಾ ವರ್ಷದಿಂದ ಕಾಡ್ತಾ ಇದೆ. ಅದು ನಮ್ಮನೆವರೆಗೂ, ನಮ್ಮೋಳಗೂ ಹಾಗೂ ದೇಹಕ್ಕೂ ಬಂದಿದೆ. ಈಗಲೂ ಇದರ ಕಡೆ ಗಮನಹರಿಸದೆ ಹೋದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿಯಾಗುತ್ತದೆ. ಇಂತಹುದೆ ವಿಚಾರ, ವಿಷಯಗಳನ್ನು ಹೆಕ್ಕಿಕೊಂಡು ಬೋಧನೆ ಮಾಡದೆ, ಮನರಂಜನೆ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಒಂದು ಸನ್ನಿವೇಶದಲ್ಲಿ ಮಗುವೊಂದು ’ನಂಗಾಗಿದ್ದೆ ನಿಂಗಾಗುತ್ತೆ’ ಎಂಬ ಡೈಲಾಗ್ ಕಥೆಗೆ ಪೂರಕವಾಗಿದೆ. ಅದು ಏನೆಂಬುದನ್ನು ಚಿತ್ರಮಂದಿರಕ್ಕೆ ಬಂದರೆ ತಿಳಿಯುತ್ತದೆ" ಎಂದರು.


      ನಾಯಕನಾಗಿ ಪ್ರಸಾದ್‌ವಶಿಷ. ನಾಯಕಿಯಾಗಿ ಪ್ರಿಯಾಂಕಮಲ್ಲಾಡಿ,  ಕೃಷಿಕರಾಗಿರುವ ಕಿಶೋರ್‌ಕುಮಾರ್ ರೀಲ್‌ ನಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿರುವುದಾಗಿ ಹೇಳಿಕೊಂಡರು. ಉಳಿದಂತೆ ಅವಿನಾಶ್, ನಿರ್ದೇಶಕ ಯೋಗರಾಜಭಟ್, ವಂದನ, ವಚನ, ವಿಶಾಲ್, ನಾಗಾರ್ಜುನಸ್ವಾಮಿ, ಚಂದ್ರು, ಛಾಯಾಶ್ರೀ, ಪ್ರಶಾಂತ್‌ಸಿದ್ದಿ ಮುಂತಾದವರು ಅಭಿನಯಿಸಿದ್ದಾರೆ.


ಛಾಯಾಗ್ರಹಣ ವಿಷ್ಣುಪ್ರಸಾದ್, ಸಂಕಲನ ಸತ್ಯಜಿತ್‌ಸಿದ್ದಕಾಂತ್ ಅವರದಾಗಿದೆ. ದಾವಣಗೆರೆ, ತುಮಕೂರು ಮುಂತಾದ ಕಡೆಗಳಲ್ಲಿ 40 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿ, ಶೇಕಡ 80ರಷ್ಟು ರಾತ್ರಿ ವೇಳೆ ಸೆರೆ ಹಿಡಿದಿರುವುದು ವಿಶೇಷ. ಶುಕ್ರ ಫಿಲಿಂಸ್‌ನ ಸೋಮಣ್ಣ ಮುಖಾಂತರ ಸಿನಿಮಾವು ಸದ್ಯದಲ್ಲೆ ತೆರೆಗೆ ಬರುವ ಸಾಧ್ಯತೆ ಇದೆ.




















Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*