Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯವಸಾಯದ ಸಮಸ್ಯೆ ಸಾರುವ ಕಬಂಧ ಲಿರಿಕಲ್ ಸಾಂಗ್ ರಿಲೀಸ್ 







     ಕುಂಜಾರ ಫಿಲಂಸ್ ಲಾಂಛನದಲ್ಲಿ ಸಿದ್ದಗೊಂಡಿರುವ ’ಕಬಂಧ’ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.


      ಕೆ.ಕಲ್ಯಾಣ್ ಸಾಹಿತ್ಯ, ಸಾನಿತೇಜ್ ಸಂಗೀತದಲ್ಲಿ ವಾಸುಕಿವೈಭವ್ ಧ್ವನಿಯಾಗಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಸತ್ಯನಾಥ್ ಮಾತನಾಡಿ "ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯಾದ್ಯಂತ ಭಯ ಹುಟ್ಟಿಸಿತ್ತು. ಇದನ್ನೆ ಬಳಸಿಕೊಂಡು ಒಂದಷ್ಟು ಹಾರರ್ ರೂಪಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ.


ಅದರಲ್ಲೂ ವ್ಯವಸಾಯದ ಸಮಸ್ಯೆ ನಮಗೆ ಗೊತ್ತಿಲ್ಲದೆ ತುಂಬಾ ವರ್ಷದಿಂದ ಕಾಡ್ತಾ ಇದೆ. ಅದು ನಮ್ಮನೆವರೆಗೂ, ನಮ್ಮೋಳಗೂ ಹಾಗೂ ದೇಹಕ್ಕೂ ಬಂದಿದೆ. ಈಗಲೂ ಇದರ ಕಡೆ ಗಮನಹರಿಸದೆ ಹೋದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿಯಾಗುತ್ತದೆ. ಇಂತಹುದೆ ವಿಚಾರ, ವಿಷಯಗಳನ್ನು ಹೆಕ್ಕಿಕೊಂಡು ಬೋಧನೆ ಮಾಡದೆ, ಮನರಂಜನೆ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಒಂದು ಸನ್ನಿವೇಶದಲ್ಲಿ ಮಗುವೊಂದು ’ನಂಗಾಗಿದ್ದೆ ನಿಂಗಾಗುತ್ತೆ’ ಎಂಬ ಡೈಲಾಗ್ ಕಥೆಗೆ ಪೂರಕವಾಗಿದೆ. ಅದು ಏನೆಂಬುದನ್ನು ಚಿತ್ರಮಂದಿರಕ್ಕೆ ಬಂದರೆ ತಿಳಿಯುತ್ತದೆ" ಎಂದರು.


      ನಾಯಕನಾಗಿ ಪ್ರಸಾದ್‌ವಶಿಷ. ನಾಯಕಿಯಾಗಿ ಪ್ರಿಯಾಂಕಮಲ್ಲಾಡಿ,  ಕೃಷಿಕರಾಗಿರುವ ಕಿಶೋರ್‌ಕುಮಾರ್ ರೀಲ್‌ ನಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿರುವುದಾಗಿ ಹೇಳಿಕೊಂಡರು. ಉಳಿದಂತೆ ಅವಿನಾಶ್, ನಿರ್ದೇಶಕ ಯೋಗರಾಜಭಟ್, ವಂದನ, ವಚನ, ವಿಶಾಲ್, ನಾಗಾರ್ಜುನಸ್ವಾಮಿ, ಚಂದ್ರು, ಛಾಯಾಶ್ರೀ, ಪ್ರಶಾಂತ್‌ಸಿದ್ದಿ ಮುಂತಾದವರು ಅಭಿನಯಿಸಿದ್ದಾರೆ.


ಛಾಯಾಗ್ರಹಣ ವಿಷ್ಣುಪ್ರಸಾದ್, ಸಂಕಲನ ಸತ್ಯಜಿತ್‌ಸಿದ್ದಕಾಂತ್ ಅವರದಾಗಿದೆ. ದಾವಣಗೆರೆ, ತುಮಕೂರು ಮುಂತಾದ ಕಡೆಗಳಲ್ಲಿ 40 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿ, ಶೇಕಡ 80ರಷ್ಟು ರಾತ್ರಿ ವೇಳೆ ಸೆರೆ ಹಿಡಿದಿರುವುದು ವಿಶೇಷ. ಶುಕ್ರ ಫಿಲಿಂಸ್‌ನ ಸೋಮಣ್ಣ ಮುಖಾಂತರ ಸಿನಿಮಾವು ಸದ್ಯದಲ್ಲೆ ತೆರೆಗೆ ಬರುವ ಸಾಧ್ಯತೆ ಇದೆ.




















Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ