LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವ್ಯವಸಾಯದ ಸಮಸ್ಯೆ ಸಾರುವ ಕಬಂಧ ಲಿರಿಕಲ್ ಸಾಂಗ್ ರಿಲೀಸ್ 







     ಕುಂಜಾರ ಫಿಲಂಸ್ ಲಾಂಛನದಲ್ಲಿ ಸಿದ್ದಗೊಂಡಿರುವ ’ಕಬಂಧ’ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.


      ಕೆ.ಕಲ್ಯಾಣ್ ಸಾಹಿತ್ಯ, ಸಾನಿತೇಜ್ ಸಂಗೀತದಲ್ಲಿ ವಾಸುಕಿವೈಭವ್ ಧ್ವನಿಯಾಗಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಸತ್ಯನಾಥ್ ಮಾತನಾಡಿ "ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯಾದ್ಯಂತ ಭಯ ಹುಟ್ಟಿಸಿತ್ತು. ಇದನ್ನೆ ಬಳಸಿಕೊಂಡು ಒಂದಷ್ಟು ಹಾರರ್ ರೂಪಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ.


ಅದರಲ್ಲೂ ವ್ಯವಸಾಯದ ಸಮಸ್ಯೆ ನಮಗೆ ಗೊತ್ತಿಲ್ಲದೆ ತುಂಬಾ ವರ್ಷದಿಂದ ಕಾಡ್ತಾ ಇದೆ. ಅದು ನಮ್ಮನೆವರೆಗೂ, ನಮ್ಮೋಳಗೂ ಹಾಗೂ ದೇಹಕ್ಕೂ ಬಂದಿದೆ. ಈಗಲೂ ಇದರ ಕಡೆ ಗಮನಹರಿಸದೆ ಹೋದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿಯಾಗುತ್ತದೆ. ಇಂತಹುದೆ ವಿಚಾರ, ವಿಷಯಗಳನ್ನು ಹೆಕ್ಕಿಕೊಂಡು ಬೋಧನೆ ಮಾಡದೆ, ಮನರಂಜನೆ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಒಂದು ಸನ್ನಿವೇಶದಲ್ಲಿ ಮಗುವೊಂದು ’ನಂಗಾಗಿದ್ದೆ ನಿಂಗಾಗುತ್ತೆ’ ಎಂಬ ಡೈಲಾಗ್ ಕಥೆಗೆ ಪೂರಕವಾಗಿದೆ. ಅದು ಏನೆಂಬುದನ್ನು ಚಿತ್ರಮಂದಿರಕ್ಕೆ ಬಂದರೆ ತಿಳಿಯುತ್ತದೆ" ಎಂದರು.


      ನಾಯಕನಾಗಿ ಪ್ರಸಾದ್‌ವಶಿಷ. ನಾಯಕಿಯಾಗಿ ಪ್ರಿಯಾಂಕಮಲ್ಲಾಡಿ,  ಕೃಷಿಕರಾಗಿರುವ ಕಿಶೋರ್‌ಕುಮಾರ್ ರೀಲ್‌ ನಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿರುವುದಾಗಿ ಹೇಳಿಕೊಂಡರು. ಉಳಿದಂತೆ ಅವಿನಾಶ್, ನಿರ್ದೇಶಕ ಯೋಗರಾಜಭಟ್, ವಂದನ, ವಚನ, ವಿಶಾಲ್, ನಾಗಾರ್ಜುನಸ್ವಾಮಿ, ಚಂದ್ರು, ಛಾಯಾಶ್ರೀ, ಪ್ರಶಾಂತ್‌ಸಿದ್ದಿ ಮುಂತಾದವರು ಅಭಿನಯಿಸಿದ್ದಾರೆ.


ಛಾಯಾಗ್ರಹಣ ವಿಷ್ಣುಪ್ರಸಾದ್, ಸಂಕಲನ ಸತ್ಯಜಿತ್‌ಸಿದ್ದಕಾಂತ್ ಅವರದಾಗಿದೆ. ದಾವಣಗೆರೆ, ತುಮಕೂರು ಮುಂತಾದ ಕಡೆಗಳಲ್ಲಿ 40 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿ, ಶೇಕಡ 80ರಷ್ಟು ರಾತ್ರಿ ವೇಳೆ ಸೆರೆ ಹಿಡಿದಿರುವುದು ವಿಶೇಷ. ಶುಕ್ರ ಫಿಲಿಂಸ್‌ನ ಸೋಮಣ್ಣ ಮುಖಾಂತರ ಸಿನಿಮಾವು ಸದ್ಯದಲ್ಲೆ ತೆರೆಗೆ ಬರುವ ಸಾಧ್ಯತೆ ಇದೆ.




















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್