Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವತೋಮುಖದ ಅಭಿವೃದ್ಧಿಗಾಗಿ ಕೈ ಪಕ್ಷ ಬೆಂಬಲಿಸಿ: ಅಭ್ಯರ್ಥಿ ಪ್ರಿಯಂಕಾ  ಜಾರಕಿಹೊಳಿ

ಬೆಳಗಾವಿ,ಏ.03:  ಚಿಕ್ಕೋಡಿ ಲೋಕಸಭಾ  ಸರ್ವತೋಮುಖದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಯುಕ್ತ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಜಿಲ್ಲಾಪಂ ವ್ಯಾಪ್ತಿಯ ಚಂದಗಡ ಗ್ರಾಮದಲ್ಲಿ ಹಮ್ಮಿಕೊಳ್ಳಲಾದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ನಾನು ಕಳೆದ 4-5 ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ಸ್ವಯಂಪ್ರೇರಿತರಾಗಿ ತೊಡಗಿಸಿಕೊಂಡಿದ್ದು, ತಾವೆಲ್ಲರೂ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿರಿ ಎಂದು ಮನಪೂರ್ವಕವಾಗಿ ಕಾರ್ಯಕರ್ತರಲ್ಲಿ ಕೇಳಿಕೊಂಡರು.

ಚಿಕ್ಕೋಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ  ಮತದಾರರು ಮತ ನೀಡುವಂತೆ  ಕೈ ಕಾರ್ಯಕರ್ತರು ಕಾಂಗ್ರೆಸ್‌ ಜಾರಿಗೆ ತಂದ ಯೋಜನೆಗಳನ್ನು ಮನೆ ಮನೆಗೆ ತಿಳಿಸಿಬೇಕು. ಸಚಿವರಾದ ನಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿ ಅವರನ್ನು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಚಿಕ್ಕೋಡಿ ಲೋಕಸಭೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಹಾಗೂ ಸುವರ್ಣ ಚಿಕ್ಕೋಡಿ ಕನಸು ನನಸು ಮಾಡಲಾಗುವುದು ಎಂದರು.

ಈ ವೇಳೆಸಚಿವರ ಆಪ್ತ ಸಹಾಯಕರಾದ ಅರವೀಂದ ಕಾರ್ಚಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌ ಮುಖಂಡರ ಕೊಡುಗೆ ಅಪಾರ. ಸಾಮಾಜಿಕ ನ್ಯಾಯ ಕೊಡುವಲ್ಲಿ ಕಾಂಗ್ರೆಸ್‌ ಪಕ್ಷ ದ ಪಾತ್ರ ಮುಖ್ಯ ಪಾತ್ರ ವಹಿಸಿದೆ. ಇಂದಿನ ನಿರುದ್ಯೋಗ ಹೆಚ್ಚಳಕ್ಕೆ ಬಿಜೆಪಿಯೇ ಕಾರಣ. ಅಚ್ಛೆ ದಿನ್‌ ಬರುತ್ತವೆ ಎಂದು ಹೇಳಿರುವ ಬಿಜೆಪಿ, 10 ವರ್ಷ ಗತಿಸಿದರೂ ಯಾವುದೇ ಅಚ್ಛೆ ದ್ದಿನ್‌ ತರಲಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರು ಅಭಿವೃದ್ಧಿ ಹಾಗೂ ಪಕ್ಷ ದ ತತ್ವ ಸಿದ್ಧಾಂತಗಳನ್ನು ಜನರಿಗೆ ಮುಟ್ಟಿಸುವ ಮೂಲಕ ಬೂತ ಮಟ್ಟದಿಂದ ಪಕ್ಷ ಸಂಗಟಿಸಲು ಕಾರ್ಯಕರ್ತರು ಸಿದ್ದರಾಗಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕ ಅರವೀಂದ ಕಾರ್ಚಿ ಹಾಗೂ ಚಂದಗಡ ಗ್ರಾಮದ ಹಿರಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ