LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

 ಕಂಚವೀರ ನಗರ ನಿವಾಸಿಗಳ ಗ್ರಾಮ ಪಂ ವಿರುದ್ದ ಆಕ್ರೋಶ

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಕಂಚವೀರ ನಗರದಲ್ಲಿ ಕಳೆದ 30 ವರ್ಷಗಳಿಂದ ಸೂಕ್ತ ಮತ್ತು ಶಾಶ್ವತ ಒಳಚರಂಡಿ ವ್ಯವಸ್ಥೆ ಇಲ್ಲದೆ ನೂರಾರು ಕುಟುಂಬಗಳು ತೀವ್ರ ಸಂಕಷ್ಟ ಅನುಭವಿಸುತ್ತಿವೆ ಎಂದು ಆರೋಪಿಸಿ ಕಂಚವೀರ ನಗರ ರಹವಾಸಿಗಳ ಸಂಘವು ಹಲವು ಭಾರಿ ಗ್ರಾಮ ಪಂಗೆ ಹಾಗೂ ಸಂಭದಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಸಿದರು ಯಾವುದೇ ಪ್ರಯೋಜನೆ ಆಗಿಲ್ಲ  ಎಂದು ಅಧಿಕಾರಿಗಳ ವಿರದ್ದ ಆಕ್ರೋಶ ವ್ಯಕ್ತಪಡಿಸಿದರು. 
ಕಂಚವೀರ ಬಡಾವಣೆಯಲ್ಲಿ ವ್ಯವಸ್ಥಿತ ಭೂಗತ ಒಳಚರಂಡಿ ಪೈಪ್ಲೈನ್ ವ್ಯವಸ್ಥೆ ಇಲ್ಲದ ಪರಿಣಾಮ ಮನೆಗಳಿಂದ ಹೊರಬರುವ ಕೊಳಚೆ ನೀರು ಸಾರ್ವಜನಿಕ ರಸ್ತೆಗಳಲ್ಲಿ ಹರಿದು ನಿಂತುಕೊಳ್ಳುತ್ತಿದೆ. ಇದರಿಂದ ಪ್ರದೇಶದಲ್ಲಿ ತೀವ್ರ ದುರ್ವಾಸನೆ ಹರಡುವುದರ ಜೊತೆಗೆ ಸೊಳ್ಳೆ, ನೊಣ ಹಾಗೂ ಇತರ ಕೀಟಗಳ ಉತ್ಪತ್ತಿಗೆ ಕಾರಣವಾಗುತ್ತಿದೆ. ಡೆಂಗ್ಯೂ, ಮಲೇರಿಯಾ, ಟೈಫಾಯಿಡ್ ಹಾಗೂ ಕಾಲರಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಆತಂಕವೂ ನಿವಾಸಿಗಳಲ್ಲಿ ಮನೆಮಾಡಿದೆ ಎಂದು ಆರೋಪಿಸಿದರು. 
ಕಳೆದ ಮೂರು ದಶಕಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೆ ಶಾಶ್ವತ ಪರಿಹಾರ ದೊರೆತಿಲ್ಲ. ಮೂಲಸೌಕರ್ಯದ ಕೊರತೆಯಿಂದಾಗಿ ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಬಡಾವಣೆಯ ನಿವಾಸಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದರು. 
ತುರ್ತು ಕ್ರಮಕ್ಕೆ ಆಗ್ರಹ: ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ, ಸಂಬಂಧಪಟ್ಟ ನಾಗರಿಕ ಮತ್ತು ಎಂಜಿನಿಯರಿಂಗ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಕಂಚವೀರ ನಗರದಲ್ಲಿ ಹೊಸ ಹಾಗೂ ಸಮರ್ಪಕ ಒಳಚರಂಡಿ ಪೈಪ್ಲೈನ್ ವ್ಯವಸ್ಥೆ ತುರ್ತಾಗಿ ನಿರ್ಮಿಸಿ, ನಿವಾಸಿಗಳ ಬಹುದಿನಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಹಾಗೂ ಸಿಇಟಿ ವಿಶೇಷ ಮಾರ್ಗದರ್ಶನ ಕಾರ್ಯಾಗಾರಸಣ್ಣ ನೀರಾವರಿ ಇಲಾಖೆ ಕಛೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಲಕ್ಷ್ಮಣ ಸವದಿ ಭೂಮಿ ಪೂಜೆ.೧೨೫ ದಿನಗಳ ಉದ್ಯೋಗ ಖಾತರಿ: ರಾಮದುರ್ಗ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆಮಹಾದೇವಪ್ಪ ಯಾದವಾಡ ಅಭಿಮಾನಿ ಬಳಗದಿಂದ ಉಚಿತ ಹೆಲ್ಮೆಟ್ ವಿತರಣೆರಾಮದುರ್ಗದಲ್ಲಿ ಉಚಿತ ಉಚಿತ ಹೃದಯ ಹಾಗೂ ಆರೋಗ್ಯ ತಪಾಸಣಾ ಶಿಬಿರಚಚಡಿ ಏತ ನೀರಾವರಿ ಶೀಘ್ರ  ಯೋಜನೆ ಅನುಷ್ಠಾನಕ್ಕೆ ಅಗ್ರಹಿಸಿ ರೈತರಿಂದ ದಿ. 24 ರಂದು ರಸ್ತಾರೋಖೊ.ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳ ಶುದ್ಧೀಕರಣಕ್ಕೆ ಖಂಡನೆ: ಕಾಗವಾಡದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಶೆಲ್ ನೆಕ್ಸ್ ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ತರಬೇತಿ ರಿಫ್ರೆಶರ್ ತರಬೇತಿ-೭  ಕಂಚವೀರ ನಗರ ನಿವಾಸಿಗಳ ಗ್ರಾಮ ಪಂ ವಿರುದ್ದ ಆಕ್ರೋಶ