Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಭಾಷೆ ಬಳಕೆ ಮಾಡದ ಅನ್ಯ ಭಾಷೆ ಬೊರ್ಡ ಹರಿದು ಕರವೆ ಪ್ರತಿಭಟನೆ

ಅಥಣಿ: ಕರ್ನಾಟಕ ಸರ್ಕಾರದ ಸ್ಪಷ್ಟ ಆದೇಶದನ್ವಯ ಪ್ರತಿಯೊಂದು ವ್ಯಾಪಾರ ಮಳಿಗೆ ಹಾಗೂ ಶಿಕ್ಷಣ ಸಂಸ್ಥೆಗಳ ನಾಮಫಲಕ ಮತ್ತು ಫ್ಲೆಕ್ಸ್ಗಳಲ್ಲಿ ಶೇ60 ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿದೆ. ಆದರೆ ಅಥಣಿ ಪಟ್ಟಣದ ಹೊರವಲಯದಲ್ಲಿ ಸಾಯನಿಕೇತನ ಶಾಲೆಯ ಭೋರ್ಡಗಳನ್ನು ನಿಯಮವನ್ನು ಗಾಳಿಗೆ ತೂರಿ, ಸಂಪೂರ್ಣ ಆಂಗ್ಲ ಭಾಷೆಯಲ್ಲಿ ಬ್ಯಾನರ್ ಅಳವಡಿಸಿರುವುದು ಕನ್ನಡ ಪರ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾದ ಘಟನೆ ನಡೆದಿದೆ
ಪಟ್ಣದ ಶಿವಯೋಗಿ ವೃತ್ತದ ಬಳಿ ಅಳವಡಿಸಲಾಗಿದ್ದ ಸಾಯಿನಿಕೇತನ ಕಾಲೇಜಿನ ಬ್ಯಾನರ್‌ನಲ್ಲಿ ಸಂಪೂರ್ಣ ಇಂಗ್ಲಿಷ್ ಭಾಷೆಯ ಬ್ಯಾನರ್‌ನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹರಿದು ಹಾಕಿ, ಶಾಲಾ ಆಡಳಿತ ಮಂಡಳಿ ಹಾಗೂ ಪುರಸಭೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕರವೆ ತಾಲೂಕು ಅಧ್ಯಕ್ಷ ಶಬ್ಬೀರ್ ಸಾತಬಚ್ಚೆ "ಸರ್ಕಾರದ ಆದೇಶದಂತೆ 60:40 ಅನುಪಾತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ನಾವು ಪದೇ ಪದೇ ಮನವಿ ಮಾಡುತ್ತಿದ್ದರೂ ಕೆಲವರು ಉದ್ದಟತನ ಪ್ರದರ್ಶಿಸುತ್ತಿದ್ದಾರೆ. ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಲು ಒಂದು ವಾರದ ಗಡುವು ನೀಡುತ್ತಿದ್ದೇವೆ. ತಪ್ಪಿದಲ್ಲಿ ಅಂತಹ ಬೋರ್ಡ್ಗಳಿಗೆ ಕಪ್ಪು ಮಸಿ ಬಳಿಯುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು," ಎಂದು ಎಚ್ಚರಿಸಿದರು.
ತಾಲೂಕು ಉಪಾಧ್ಯಕ್ಷ ಮಂಜು ಹೋಳಿಕಟ್ಟಿ ಮಾತನಾಡಿ ಪುರಸಭೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು ಸರ್ಕಾರದ ನಿಯಮವಿದ್ದರೂ ಸಾಯಿನಿಕೇತನ ಶಾಲೆಯ ಸಂಪೂರ್ಣ ಆಂಗ್ಲ ಭಾಷೆಯ ಬ್ಯಾನರ್‌ಗೆ ಅನುಮತಿ ನೀಡಿದ ಅಧಿಕಾರಿಗಳ ನಡೆ ನಾಚಿಕೆಗೇಡು. ಇನ್ನು ಮುಂದೆ ಇಂತಹ ನಿಯಮಬಾಹಿರ ಫ್ಲೆಕ್ಸ್ಗಳಿಗೆ ಅನುಮತಿ ನೀಡಿದರೆ, ಸಂಬಂಧಪಟ್ಟ ಅಧಿಕಾರಿಗಳಿಗೂ ಕಪ್ಪು ಮಸಿ ಬಳಿದು ಹೋರಾಟ ಮಾಡ ಬೇಕಾಗುತ್ತದೆ ಎಂದು ಹೇಳಿದರು
ಈ ವೇಳೆ ಹೋರಾಟದಲ್ಲಿ ಉಪಾಧ್ಯಕ್ಷ ಸಿದ್ದಗೌಡ ಹಿಪ್ಪರಗಿ, ಸಚಿನ ಪಾಟಿಲ, ಜಾಫರ್ ಪಟೇಲ, ಪ್ರಹಲಾದ ವಾಗಮೋರೆ, ರಾಹಿದ ಮಾಸ್ಟರ್, ಯಾಸಿನ ಮಕಾನದಾರ, ರಾಜು ತಂಗಡಿ ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ