Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ 28 ರಂದು ಕನ್ನಡ ನುಡಿ ತೇರು 2024 ಕಾರ್ಯಕ್ರಮ

ಬೆಳಗಾವಿ,27: ವಿದ್ಯಾಧರ ಕನ್ನಡ ಪ್ರತಿಷ್ಠಾನ ಮುಂಬಯಿ-ಧಾರವಾಡ-ತೆಲಂಗಾಣ ಹಾಗೂ ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ) ಬೆಳಗಾವಿ ಸಹಯೋಗದಲ್ಲಿ ಮಾತೋಶ್ರೀ ಜಾನಕಿಬಾಯಿ ರಂಗರಾವ ಮುತಾಲಿಕ್ ದೇಸಾಯಿ ಅವರ ಸಂಸ್ಮರಣೆಯ ಪ್ರಯುಕ್ತ ದಿನಾಂಕ ೨೮-೦೪-೨೦೨೪ ರವಿವಾರ ಬೆಳಗ್ಗೆ ೧೦ ಗಂಟೆಗೆ ಕನ್ನಡ ಸಾಹಿತ್ಯ ಭವನ ಚೆನ್ನಮ್ಮ ವೃತ್ತ, ಬೆಳಗಾವಿಯಲ್ಲಿ ಕನ್ನಡ ನುಡಿ ತೇರು ೨೦೨೪ ಕಾರ್ಯಕ್ರಮ ಜರುಗುತ್ತಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವಿದ್ಯಾಧರ ಮುತಾಲಿಕ ದೇಸಾಯಿ ಅವರು ವಹಿಸಿಕೊಳ್ಳುತ್ತಿದ್ದಾರೆ.


ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಉಪನ್ಯಾಸ ಹಾಗೂ ಪ್ರತಿಷ್ಠಾನದಿಂದ ಕೊಡಮಾಡಲ್ಪಡುವ ೨೦೨೩ ನೇ ಸಾಲಿನ ಮಾತೋಶ್ರೀ ಜಾನಕಿಬಾಯಿ ರಂಗರಾವ್ ದೇಸಾಯಿ ಪ್ರಶಸ್ತಿ ೨೦೨೩, ಕನ್ನಡ ಮಹಿಳಾ ಚೇತನ ಪ್ರಶಸ್ತಿ, ಕನ್ನಡ ಸೇನಾನಿ ಪ್ರಶಸ್ತಿ, ಕನ್ನಡ ಸಾಹಿತ್ಯ ಚೇತನ ಪ್ರಶಸ್ತಿ, ಕನ್ನಡ ಭೂಷಣ ಪ್ರಶಸ್ತಿ, ಕನ್ನಡ ಪ್ರತಿಭಾ ದೀಪ್ತಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುವದು ಈ ಪ್ರಶಸ್ತಿಗಳಿಗೆ ಕ್ರಮವಾಗಿ ಶ್ರೀ ಶಿವಾಜಿ ಕಾಗಣಿಕರ, ಕೊಟ್ಟಣಬಾವಿ. ಶ್ರೀಮತಿ ಮಂಗಲಾ ಮೆಟಗುಡ್ಡ ಬೈಲಹೊಂಗಲ. ಶ್ರೀ ಮ.ಯ.ಮೆಣಸಿನಕಾಯಿ ಬೆಳಗಾವಿ. ಶ್ರೀ ಸ.ರಾ.ಸುಳಕೊಡೆ ಬೆಳಗಾವಿ. ಶ್ರೀ ಆರ್.ಬಿ.ಬನಶಂಕರಿ. ಶ್ರೀಮತಿ ಶೋಭಾ ಬಸವರಾಜ ಮೇಟಿ ಮುಂಡರಗಿ ಇವರುಗಳು ಬಾಜನರಾಗಿದ್ದಾರೆ.


ಕಾವ್ಯೋದ್ಯೋಗ ಎಂಬ ವಿಷಯದ ಮೇಲೆ ಉಪನ್ಯಾಸ ಹಾಗೂ ಕವಿಗೋಷ್ಠಿ ಹಾಗೂ ಕಾವ್ಯ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಕವಿಗಳಿಗೆ ಬಹುಮಾನ ವಿತರಣೆ ಜರುಗುತ್ತಿದ್ದು, ವಿಶೇಷವಾಗಿ ಕನ್ನಡ ಕಾವ್ಯಗಳಲ್ಲಿ ಮುಂಡಿಗೆಯ ಪ್ರಕಾರ ಎಂಬ ವಿಷಯದ ಮೇಲೆ ಡಾ.ಶ್ಯಾಮಲಾ ಪ್ರಕಾಶ್ ಸಂಗೀತ ವಿಧೂಷಿಗಳು ಹಾಗೂ ಸಾಹಿತಿಗಳು ಮಾತನಾಡಲಿದ್ದಾರೆ. ಮಾತಿನೊಳಗನ ಧಾತು, ಕಥೆ ಹೇಳುವೆ ಮತ್ತು ಆಯ್ದ ಇತರ ಕಥೆಗಳು ಎಂಬ ಪುಸ್ತಕಗಳು ಬಿಡುಗಡೆಗೊಳ್ಳಲಿವೆ. ಕನ್ನಡ ಮನಸುಗಳಿಗೆ ವಿದ್ಯಾಧರ ಕನ್ನಡ ಪ್ರತಿಷ್ಠಾನವು ಹೃದಯಪೂರ್ವಕ ಸ್ವಾಗತ ಬಯಸುತ್ತದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ