Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯರಗಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಯರಗಟ್ಟಿ: ಕನ್ನಡ ರಾಜ್ಯೊ?ತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಎಲ್ಲರೂ ಕೂಡಿ ನಮ್ಮ ಕನ್ನಡದ ಅಭಿಮಾನವನ್ನು ಸಂಭ್ರಮಿಸೋಣ, ಕನ್ನಡಕ್ಕಾಗಿ ದುಡಿದವರನ್ನು ಗೌರವಿಸೋಣ ಎಂದು ತಹಸೀಲ್ದಾರ್ ಎಮ್. ವ್ಹಿ. ಗುಂಡಪ್ಪಗೋಳ ಹೇಳಿದರು.

ಸೋಮವಾರ ಇಲ್ಲಿನ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿಆಯೋಜಿಸಿದ ಕನ್ನಡ ರಾಜ್ಯೊ?ತ್ಸವದ ಪೂರ್ವಭಾವಿ ಸಭೆಯಲ್ಲಿಮಾತನಾಡಿದ ಅವರು, ನವೆಂಬರ್ ೧ ರಂದು ಬೆಳಗ್ಗೆ ೮.೩೦ಕ್ಕೆ ಗಾಂಧಿ ವೃತ್ತದಿಂದ ಸರಕಾರಿ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನೊಳಗೊಂಡು ಪ್ರಭಾತಭೇರಿ ಆರಂಭಿಸಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಮಾರಂಭ ನಡೆಸಲಾಗುವುದು.

ಕನ್ನಡ ಭುವನೇಶ್ವರಿಯನ್ನು ಅಲಂಕಾರಗೊಳಿಸಿ ಮೆರವಣಿಗೆ ನಡೆಸಲಾಗುವುದು. ಪ್ರಾಥಮಿಕ ಶಾಲಾ ಆವರಣದಲ್ಲಿ ಧ್ವಜಾರೋಹಣ ಹಾಗೂ ಗಣ್ಯರ ಹಿತ ನುಡಿಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಸರಕಾರಿ ಕಚೇರಿಗಳನ್ನು ವಿದ್ಯುದ್ದಿ?ಪ ಸೇರಿದಂತೆ ವಿವಿಧ ರೀತಿಯಲ್ಲಿಅಲಂಕಾರಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ವಿಷಯದಲ್ಲಿಅತ್ಯುತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿಗೌರವಿಸಲಾಗುತ್ತದೆ. ಅದರೊಂದಿಗೆ ತಾಲೂಕಿನ ಪ್ರತಿಭಾವಂತರನ್ನು ಹಾಗೂ ಕನ್ನಡಕ್ಕಾಗಿ ಶ್ರಮಿಸಿದವರನ್ನು ಗೌರವಿಸಲಾಗುತ್ತದೆ ಎಂದರು.

ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಶು ವೈದ್ಯಾಧಿಕಾರಿ ಡಾ. ಎಂ ವ್ಹಿ ಪಾಟೀಲ, ಎಎ??? ವಾಯ್ ಎಂ. ಕಡಕೋಳ, ಹೇಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಪ. ಪಂ. ಸದಸ್ಯರಾದ ನಿಖಿಲ ಪಾಟೀಲ, ಹನಮಂತ ಹಾರೂಗೊಪ್ಪ, ಸಲಿಂಬೇಗ ಜಮಾದಾರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಭಾಸ್ಕರ ಹಿರೇಮೆತ್ರಿ, ಕಸಾಪ ಅಧ್ಯಕ್ಷ ತಮ್ಮಣ್ಣಾ ಕಾಮಣ್ಣವರ, ಕೃಷಿ ಅಧಿಕಾರಿ ಎಂ. ಜಿ. ಕಳಸಪ್ಪನವರ, ಆರೋಗ್ಯ ಇಲಾಖೆಯ ಸುನೀಲ ಕಾಶನ್ನವರ, ಕರವೇ ಅಧ್ಯಕ್ಷ ರಫೀಕ ಡಿ.ಕೆ, ನಿಲಯ ಪಾಲಕರಾದ ಆಶಾ ಪರೀಟ, ಉಪನ್ಯಾಸಕರಾದ ಡಾ. ರಾಜಶೇಖರ ಬಿರಾದಾರ, ಎಂ. ಡಿ. ಸರದಾರ, ಬಿ. ಎಸ್. ಆಲದಕಟ್ಟಿ, ಎ. ಎ. ಮಕ್ತುಮನ್ನವರ, ಎಂ ಎಂ. ಚಿಲದ, ಶಿವಾನಂದ ಕರಿಗೋಣವರ, ಫಾರುಕ್ ಅತ್ತಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಮೊದಲಾದವರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ