Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಕದಲ್ಲಿ ಕನ್ನಡಿಗ, ಕನ್ನಡವೇ ಸಾರ್ವಭೌಮ  ;  ಎಂ. ಗೋವಿಂದರಾಜು





ಬಳ್ಳಾರಿ. ಮಾ. 03;..ಕನ್ನಡ ಭಾಷೆಯನ್ನು ಸತತವಾಗಿ ಬಳಸುವುದರಿಂದ ಜೀವಂತವಾಗಿಡಬಹುದು, ಪ್ರಪಂಚದಲ್ಲಿ ಈಗಾಗಲೇ ಸಾವಿರಾರು ಭಾಷೆಗಳು ನಶಿಸಿಹೋಗಿವೆ ಕನ್ನಡ ಭಾಷೆಯನ್ನು ಹಾಗಾಗಲು ಬಿಡದಂತೆ ಸದಾ ನಾವು ನೀವು ಬಳಸಿಕೊಳ್ಳಬೇಕಾದ ಅಗತ್ಯವಿದೆ, ರಾಜ್ಯದಲ್ಲಿ ಕನ್ನಡ ಮತ್ತು ಕನ್ನಡಿಗನೇ ಸಾರ್ವಭೌಮ ಎನ್ನುವಂತೆ ಎಲ್ಲಾ ಭಾಷೆ ಗೊತ್ತಿದ್ದರೂ ನಮ್ಮ ಬಾಷೆಗೆ ರಾಜನ ಸ್ಥಾನವನ್ನು ನೀಡಬೇಕು ಎಂದು ಮಹಾನಗರ ಪಾಲಿಕೆ ಸದಸ್ಯ ಗೋವಿಂದರಾಜು ತಿಳಿಸಿದರು.

 ಅದೇ ಪ್ರಕಾರವಾಗಿ ಜನರು ನಿಸ್ವಾರ್ಥ ಸೇವೆಯಿಂದ ಜನಸೇವೆಯೇ ಜನಾರ್ಧನ ಸೇವೆ ಎಂದು ಭಾವಿಸಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು ಶ್ರೀ ಚೇಳ್ಳಗುರ್ಕಿ ಎರ್ರಿಸ್ವಾಮಿ ಸ್ಮರಣಾರ್ಥ ದತ್ತಿ, ಕಪ್ಪಗಲ್ಲು ನಬೀಸಾಬ್ ಮತ್ತು ಹೊನ್ನೂರಮ್ಮ ದತ್ತಿ ಮತ್ತು ಗುರ್ರಂ ಸಾಕಮ್ಮ ಮತ್ತು ರಾಮಯ್ಯ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆ ಉಳಿದರೆ ಮಾತ್ರ ಕನ್ನಡ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಆರ್.ವೈ.ಎಂ ಇಂಜಿನೀಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.‌ ಎ. ತಿಮ್ಮನಗೌಡ ಅಭಿಪ್ರಾಯಪಟ್ಟರು.

ಕೈಗಾರಿಕಾ ತರಬೇತಿ ಸಂಸ್ಥೆಯ ಹಿರಿಯ ತರಬೇತಿ ಅಧಿಕಾರಿ ರಿಜ್ವಾನ್ ನಾಸೀರ್ ಖಾನ್ ಪರಿಷತ್ತಿನ ಕನ್ನಡ ಕಾರ್ಯಕ್ರಮಗಳು ತಾಂತ್ರಿಕ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಕೆ.ಹೆಚ್.ಎಂ. ಪಂಡಿತಾರಾಧ್ಯ ಅವರು ಮನುಷ್ಯನ ಸೃಜನಶೀಲತೆ ಅಭಿವ್ಯಕ್ತಗೊಳ್ಳುವುದು ಮಾತೃಭಾಷೆಯಲ್ಲಿಯೇ ಹೀಗಾಗಿ ನಮ್ಮ ಸಂಸ್ಥೆಯಲ್ಲಿ ಕಸಾಪವು ದತ್ತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದರು.

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಅಂಗಡಿ ಶಂಕರ್, ಸರ್ಕಾರಿ ತರಬೇತಿ ಸಂಸ್ಥೆಯ ಅಧಿಕಾರಿಗಳಾದ  ಸಿ. ಶಶಿರೇಖಾ,  ಇಂದಿರಾ, ಜಿ. ಶಂಕರ ಮತ್ತು ದತ್ತಿ ದಾನಿಗಳಾದ ಕಪ್ಪಗಲ್ಲು ರಸೂಲ್ ಸಾಬ್, ಕಸಾಪ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ.ಸಾ.ಪ ಗ್ರಾಮೀಣ ಘಟಕದ ಅಧ್ಯಕ್ಷ ಎ. ಎರ್ರಿಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ಕಪ್ಪಗಲ್ಲು ಬಿ ಚಂದ್ರಶೇಖರ ಆಚಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿ. ಶಂಕರ ಸ್ವಾಗತಿಸಿದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ