Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂತಾರ ಚಾಪ್ಟರ್ 1 ಮೇಕಿಂಗ್ ವಿಡಿಯೋ ಬಿಡುಗಡೆ









     ರಾಜಕುಮಾರ, ಕೆಜಿಎಫ್, ಸಲಾರ್, ಕಾಂತಾರಾದಂತಹ ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡಿದ ಹೊಂಬಾಳೆ ಫಿಲ್ಮ್ಸ್,  ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರ 'ಕಾಂತಾರ ಚಾಪ್ಟರ್ 1' ಸಿನಿಮಾದ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಿದೆ.

     ಈ ವಿಡಿಯೋ, ಸಿನಿಮಾಕ್ಕಾಗಿ ಹಾಕಿದ ಭಾರಿ ಶ್ರಮ ಮತ್ತು ಅದರ ಅದ್ದೂರಿತನವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಪ್ರೇಕ್ಷಕರಿಗೆ ನೀಡಿದೆ.

ಚಿತ್ರೀಕರಣ ಮುಗಿದ ಸಂಭ್ರಮದಲ್ಲಿ ಬಿಡುಗಡೆಯಾಗಿರುವ ಈ ವಿಡಿಯೋ, 250 ದಿನಗಳಿಗೂ ಹೆಚ್ಚು ಕಾಲ ನಡೆದ ಶೂಟಿಂಗ್ ಪಯಣವನ್ನು ತೋರಿಸುತ್ತದೆ. ಮೂರು ವರ್ಷಗಳ ನಿರಂತರ ಶ್ರಮದ ಫಲವೇ ಈ ಸಿನಿಮಾ.

     ಸಾವಿರಾರು ಸಿಬ್ಬಂದಿ ಪ್ರತಿ ಹಂತದಲ್ಲೂ ಹಗಲಿರುಳು ಕೆಲಸ ಮಾಡಿದ್ದಾರೆ. ಈ ಮೇಕಿಂಗ್ ವಿಡಿಯೋ ರಿಷಬ್ ಶೆಟ್ಟಿ ಅವರ ಕಥೆ ಹೇಳುವ ಶೈಲಿ ಮತ್ತು ಅವರ ನಿಖರತೆಗೆ ಒಂದು ಗೌರವವಾಗಿದೆ.

'ಕಾಂತಾರ ಚಾಪ್ಟರ್ 1' ಹೊಂಬಾಳೆ ಫಿಲ್ಮ್ಸ್‌ನ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್, ಛಾಯಾಗ್ರಾಹಕ ಅರವಿಂದ್ ಕಶ್ಯಪ್, ಮತ್ತು ಪ್ರೊಡಕ್ಷನ್ ಡಿಸೈನರ್ ವಿನೇಶ್ ಬಂಗ್ಲನ್ ಸೇರಿದಂತೆ ಇಡೀ ತಂಡ ಸಿನಿಮಾಗೆ ಅದ್ಭುತ ದೃಶ್ಯ ಮತ್ತು ಭಾವನಾತ್ಮಕ ಸ್ಪರ್ಶ ನೀಡಿದ್ದಾರೆ.

     ಅಕ್ಟೋಬರ್ 2 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿರುವ ಈ ಸಿನಿಮಾ, ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಾಣಲಿದೆ. ಇದರಿಂದ ಸಿನಿಮಾ ತನ್ನ ಸಾಂಸ್ಕೃತಿಕ ಬೇರುಗಳನ್ನು ಉಳಿಸಿಕೊಂಡೇ ವಿವಿಧ ಭಾಷೆ ಮತ್ತು ಪ್ರದೇಶಗಳ ಪ್ರೇಕ್ಷಕರನ್ನು ತಲುಪಲಿದೆ.

     'ಕಾಂತಾರ ಚಾಪ್ಟರ್ 1' ಮೂಲಕ ಹೊಂಬಾಳೆ ಫಿಲ್ಮ್ಸ್ ಭಾರತೀಯ ಸಿನಿಮಾದ ಗಡಿಗಳನ್ನು ಮೀರಿ ಬೆಳೆಯುತ್ತಿದೆ. ಜಾನಪದ, ನಂಬಿಕೆ ಮತ್ತು ಸಿನಿಮೀಯ ಶ್ರೇಷ್ಠತೆಯನ್ನು ಆಚರಿಸುವ ಒಂದು ಆಳವಾದ ಅನುಭವವನ್ನು ಈ ಸಿನಿಮಾ ಪ್ರೇಕ್ಷಕರಿಗೆ ನೀಡಲಿದೆ ಎಂದು ಚಿತ್ರತಂಡ ಹೇಳಿದ.















Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ