Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಳುಮಲೆ ಸಿನಿಮಾದ  ಕಾಪಾಡೋ ದ್ಯಾವ್ರೇ ಸಾಂಗ್ ರಿಲೀಸ್


     ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾ ತನ್ನ ಕಂಟೆಂಟ್ ಮೂಲಕ ಸದ್ದು ಮಾಡುತ್ತಿದೆ. ಈಗಾಗಲೇ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ಈ ಚಿತ್ರದ 'ಕಾಪಾಡೋ ದ್ಯಾವ್ರೇ' ಎಂಬ ಗೀತೆಯನ್ನು ಅನಾವರಣ ಮಾಡಲಾಗಿದೆ.

     ಚಿತ್ರರಂಗದ ಹಿರಿಯ ನಟಿಯರಾದ ಶೃತಿ, ಸುಧಾರಾಣಿ ಹಾಗೂ ತಾರಾ ಅನುರಾಧ ಹಾಡನ್ನು ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕ ತರುಣ್ ಸುಧೀರ್, ನಿರ್ದೇಶಕ ಪುನೀತ್ ರಂಗಸ್ವಾಮಿ, ನಾಯಕ ರಾಣಾ, ನಾಯಕಿ ಪ್ರಿಯಾಂಕಾ, ಸಂಗೀತ ನಿರ್ದೇಶಕ ಡಿ‌ ಇಮ್ಮಾನ್, ಗಾಯಕಿ‌ ಮಂಗ್ಲಿ, ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿರುವ ರಾಜುಗೌಡ್ರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

     ನಟಿತಾರ ಮಾತನಾಡಿ "ಹಾಡು ನೋಡಿ ತುಂಬಾ ಖುಷಿಯಾಯ್ತು. ಸಣ್ಣದಾಗಿ ದುಃಖ ಆಯ್ತು. ಎಲ್ಲಿ ಪ್ರೇಮಿಗಳನ್ನು ಬಹಳ ಕಷ್ಟಪಡುವುದು ತೋರಿಸುತ್ತಾರೆ ಎಂದು. ಇದು ಸತ್ಯಕಥೆ ಅಂದಾಗ ಅದು ಹಾಗೇಯೇ ತೋರಿಸಬೇಕು. ರಾಣಾ, ಪ್ರಿಯಾಂಕಾ ತುಂಬಾ ಚೆನ್ನಾಗಿ ಕಾಣಿಸುತ್ತಾರೆ. ಡೈರೆಕ್ಟರ್ ತಮ್ಮ ಕೆಲಸ ಮಾಡಿದ್ದಾರೆ.  ತರುಣ್ ಸುಧೀರ್  ಏನ್ ಮಾಡಿದ್ರೂ ಫಸ್ಟ್ ಕ್ಲಾಸ್ ಆಗಿದೆ ಅನ್ನೋದು ಫ್ರೋವ್ ಆಗಿದೆ. ಸಾಂಗ್ ಚೆನ್ನಾಗಿದೆ. ಸಿನಿಮಾ ಹಿಟ್ ಆಗಲಿ" ಎಂದು ಹಾರೈಸಿದರು.

     ಶೃತಿ "ಏಳುಮಲೆ' ಸಿನಿಮಾ ನೋಡಿ ಪ್ರೇಕ್ಷಕರು ಹೊರಗೆ ಬಂದಾಗ ರಾಣಾ ಸಖತ್ ಆಗಿ ಆಕ್ಟ್ ಮಾಡಿದ್ದಾರೆ ಎಂದು ಹೇಳ್ತಾರೆ. ಒಬ್ಬ ಕಲಾವಿದನಾಗಿ ಹೆಸರು ಮಾಡುವ ಅವಕಾಶ ಈ ಚಿತ್ರದಲ್ಲಿ ರಾಣಾಗೆ ಸಿಕ್ಕಿದೆ. ಪ್ರಿಯಾಂಕಾ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಇದು ನನ್ನ ಕುಟುಂಬದ ಸಿನಿಮಾ. ನಾವು ಬೆಂಗಳೂರಿಗೆ ಬರಲು ಕಾರಣ ಸುಧೀರ್ ಸರ್. ಹೊಸಬರಿಗೆ ಯಾರು ಅವಕಾಶ ಕೊಡ್ತಾರೆ ಎಂಬ ಭಯ ಹೋಗಲಾಡಿಸಲು ಚಿತ್ರರಂಗದಲ್ಲಿ ತರುಣ್ ತರಹದ ಡೈರೆಕ್ಟರ್ ಇದ್ದಾರೆ. ಹೊಸಬರಿಗೆ ಅವಕಾಶ ಕೊಡುವುದು ಚಿಕ್ಕ ವಿಷಯವಲ್ಲ. ಅದನ್ನು ತರುಣ್ ಮಾಡುತ್ತಿದ್ದಾನೆ. ಇಡೀ ತಂಡಕ್ಕೆ ಒಳ್ಳೆದಾಗಲಿ" ಎಂದರು.

     ನಟಿ ಸುಧಾರಾಣಿ "ಕನ್ನಡ ಚಿತ್ರರಂಗಕ್ಕೆ ಮತ್ತೆ ಅದೇ ಹೊಳಪು, ಮೆರಗು 'ಏಳುಮಲೆ' ಸಿನಿಮಾದ ಟೀಸರ್ ಹಾಡು ನೋಡಿದಾಗ ಸಿಗುತ್ತಿದೆ. ಇಡೀ ತಂಡಕ್ಕೆ ಒಳ್ಳೆದಾಗಲಿ. ಇಡೀ ತಂಡದ ಡೆಡಿಕೇಷನ್ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಕಲಾ ಸರಸ್ವತಿ ಎಲ್ಲರನ್ನೂ ಕೈಬೀಸಿ ಕರೆಯಲ್ಲ. ಕರೆದಾಗ ಅದನ್ನು ಭಕ್ತಿ, ‌ನಿಷ್ಠೆಯಿಂದ ಮುಂದುವರೆಸಬೇಕು. ಆ ಅವಕಾಶ ರಾಣಾ, ಪ್ರಿಯಾಂಕಾಗೆ ಸಿಕ್ಕಿದೆ. ಇದನ್ನು ಅವರು ಸದುಪಯೋಗಪಡಿಸಿಕೊಂಡಿದ್ದಾರೆ. ತರುಣ್ ಅವರು ತಂದೆ ಹೆಸರನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ನಟನೆ, ನಿರ್ದೇಶನ ಎರಡರಲ್ಲಿಯೂ ಹೆಸರು ಮಾಡಿದ್ದಾರೆ. ಈಗ ನಿರ್ಮಾಪಕರಾಗಿ ಒಳ್ಳೊಳ್ಳೆ ಸಿನಿಮಾ ಮಾಡುತ್ತಿದ್ದಾರೆ" ಎಂದು ಹೇಳಿದರು.

     ಡಿ‌ ಇಮ್ಮಾನ್ "ಈ‌ ಮೊದಲು ಸುದೀಪ್ ಸರ್ ಹಾಗೂ ಪುನೀತ್ ಸರ್ ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ಈಗ ತರುಣ್ ಸುಧೀರ್ ಅವರ ಸಿನಿಮಾದ ಭಾಗವಾಗಿದ್ದೇನೆ. ತರುಣ್ ಅದ್ಭುತ ವ್ಯಕ್ತಿ. ನಾನು ಅವರ ಮೂಲಕ ನಿರ್ದೇಶಕ ಪುನೀತ್ ಸರ್ ಭೇಟಿಯಾದೆ. 'ಏಳುಮಲೆ' ಒಂದು ಸುಂದರ ಪ್ರೇಮಕಥೆ. ಈ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಚೆನ್ನಾಗಿ ನಟಿಸಿದ್ದಾರೆ. ನಾನು ಚಿತ್ರಕ್ಕಾಗಿ ಸಂಗೀತ ನಿರ್ದೇಶನ ಮಾಡಿದ್ದೇನೆ. ಈ ಜರ್ನಿಯನ್ನು ತುಂಬಾ ಎಂಜಾಯ್ ಮಾಡಿದೆ.‌ ನಾನು ಸಿನಿಮಾ ನೋಡಿದ ಬಳಿಕ ಯಾರು ಕ್ಯಾಮೆರಾಮೆನ್ ಎಂದು ಕೇಳಿದೆ. ಅದ್ವೈತ್ ತುಂಬಾ ಒಳ್ಳೆ ಕೆಲಸ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ" ಎಂದು ಶುಭ ಹಾರೈಸಿದರು.

     ಕಾಪಾಡೋ ದ್ಯಾವ್ರೇ ಹಾಡು ಮೂರು ಭಾಷೆಯಲ್ಲಿ ಬಿಡುಗಡೆಯಾಗಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದ ಮೆಲೋಡಿ ಗೀತೆಗೆ ಮಂಗ್ಲಿ ಧ್ವನಿಯಾಗಿದ್ದಾರೆ. ಪ್ರೀತಿಗಾಗಿ ಪರಿತಪಿಸುವ ಪ್ರೇಮಿಗಳ‌ ನಡುವಿನ ಮಧುರ ಗೀತೆ ಇದಾಗಿದ್ದು, ರಾಣಾ ಹಾಗೂ ಪ್ರಿಯಾಂಕಾ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

     ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ