Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರೆಡೀಶರ ಸಮಾಜಸೇವೆ ಅನನ್ಯ: ಅಮಾತಿ ಬಸವರಾಜ್

ಬಳ್ಳಾರಿ, ಜೂ.17:  ಕಳೆದ ಎರೆಡು ದಿನಗಳಿಂದ ಇಲ್ಲಿನ  ಬಸವಭವನದಲ್ಲಿ ನಡೆಯುತ್ತಿರುವ ಗದ್ದಿಕೇರಿ-ನಂದೀಪುರದ ಚರಂತಪ್ಪಜ್ಜ ಸ್ವಾಮಿಗಳ 22ನೇ ಸ್ಮರಣೋತ್ಸವದ ಎರಡನೇ ದಿನವಾದ  ನಿನ್ನೆ ಸಂಜೆ. ವಿವಿಧ ಮಠಾಧೀಶರ ಸಾನಿಧ್ತದಲ್ಲಿ  ನಡೆದ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಿರಿಯ ಸಂಶೋಧಕ ಡಾ.ಸಿ. ಶಿವಕುಮಾರ ಸ್ವಾಮಿಗಳ 'ವಚನಾನುಸಂಧಾನ' ಕೃತಿ ಲೋಕಾರ್ಪಣೆ  ಮಾಡಲಾಯ್ತು.
ಕೃತಿ ಕುರಿತು ಮಾತನಾಡಿದವರು,  ಕೃತಿಯಲ್ಲಿ ಬರುವ ಶಿವದೀಕ್ಷೆ, ಲಿಂಗದೀಕ್ಷೆ, ಭಸ್ಮ, ರುದ್ರಾಕ್ಷಿ, ಪಂಚಾಚಾರ, ಷಟ್ಸ್ಥಲ, ಲಿಂಗಾಂಗ ಸಾಮರಸ್ಯ ಹಾಗೂ ಸಮಾಧಿ ಸಂಸ್ಕಾರ ಕುರಿತು  ಬರೆದಿರುವ ಲೇಖನಗಳ ಮಹತ್ವ ಕತಿಳಿಸಿದರು. ಉಪನ್ಯಾಸಕ  ಆಮಾತಿ ಬಸವರಾಜ್ ಅವರು 'ಸಕ್ಕರೆ ಕರೆಡೇಶನವರ ಮರಿಕಲ್ಯಾಣದ ಪರಿಕಲ್ಪನೆ' ಕುರಿತು ವಿಶೇಷ ಉಪನ್ಯಾಸ ನೀಡಿ,  ಸಕ್ಕರೆ ಕರೆಡೀಶರ ಸಮಾಜಸೇವೆ, ಶಿಕ್ಷಣ ಹಾಗೂ ಸಹಕಾರ ಕ್ಷೇತ್ರದಲ್ಲಿ ಮಾಡಿರುವ ಸೇವೆ ಹಾಗೂ ಜಿಲ್ಲೆಯ ಅಭಿವೃದ್ಧಿ ನೆಲೆಯಲ್ಲಿ ಅವರು ಕೈಗೊಂಡ ಕಾರ್ಯಗಳ ಕುರಿತು ತಿಳಿಸಿದರು.
ನಂದಿಪುರ ಪುಣ್ಯಕ್ಷೇತ್ರದ ಡಾ.ಮಹೇಶ್ವರಸ್ವಾಮಿ, ಬೆಟ್ಟದೂರು ಪ್ರಭುಲಿಂಗೇಶ್ವರ ಮಠದ ಮಹಾದೇವ ದೇವಸ್ವಾಮಿ, ಜಂಗಮ ಹೊಸಹಳ್ಳಿ ಪುರವರ್ಗ ಮಠದ ಅಜಾತ ಶಂಭುಲಿಂಗ ಶಿವಾಚಾರ್ಯಸ್ವಾಮಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವಚನಾನು ಸಂಧಾನ ಕೃತಿಯ ಲೇಖಕ, ಹಿರಿಯ ಸಂಶೋಧಕ ಡಾ.ಸಿ. ಶಿವಕುಮಾರಸ್ವಾಮಿ, 579 ಕೃತಿಗಳ ಲೇಖಕ ಎಸ್.ವಿ. ಪಾಟೀಲ್ ಗುಂಡೂರ, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಬಿಚ್ಚುಗಲ್ಲು ಪಂಚಾಕ್ಷರಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ನಿಷ್ಠಿ ರುದ್ರಪ್ಪ, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಪಲ್ಲೇದ ಪಂಪಾಪತೆಪ್ಪ, ಎರಿಸ್ವಾಮಿ ಬೂದಿಹಾಳುಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ  ಅಧಿಕಾರಿ ಚೋರನೂರು ಕೊಟ್ರಪ್ಪ,  ಮಠಂ ನಂದೀಶ, ಮಸೀದಿಪುರದ ಸಿದ್ದರಾಮನಗೌಡ  ಭಾಗವಹಿಸಿದ್ದರು.
  ಸಿದ್ಧರಾಮ ಕಲ್ಮಠ ಪ್ರಾಸ್ತಾವಿಕ ಮಾತನಾಡಿದರು. ಲೇಖಕಿ ಡಾ.ಎಚ್.ಎಂ.ಉಮಾ ಕಾರ್ಯಕ್ರಮ ನಿರ್ವಹಿಸಿದರು. ಚರಂತಪ್ಪಜ್ಜನವರ ಲೀಲೆಗಳ ಕುರಿತು ದೊಡ್ಡಬಸವ ಗವಾಯಿ ಡಿ.ಕಗ್ಗಲ್ ಮತ್ತವರ ತಂಡ ಹಾಡಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ