Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏನ್ ಪ್ರತಾಪ್ ರೆಡ್ಡಿ ಅವರ ಭೂ ಹಗರಣಗಳ ಕುರಿತು ನ್ಯಾಯಾಂಗ ತನಿಖೆ ಆಗಲಿ : ಕರಿಯಪ್ಪ ಗುಡಿಮಣಿ 





ಬಳ್ಳಾರಿ, ಜ.16: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್. ಪ್ರತಾಪ್ ರೆಡ್ಡಿಯವರ ಭೂ ಹಗರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಿ, ಬಡವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಮುಖಂಡ ಕರಿಯಪ್ಪ ಗುಡಿಮಣಿ ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೆ ನಂ.715ರ ಇನಾಂ ಭೂಮಿಯನ್ನು 1970ರ ದಶಕದಲ್ಲೇ ಭೂ ನ್ಯಾಯ ಮಂಡಳಿ ದಲಿತ ಹಾಗೂ ಹಿಂದುಳಿದ ವರ್ಗದ ಕುಟುಂಬಗಳಿಗೆ ಮಂಜೂರು ಮಾಡಿದ್ದು, ಎಲ್ಲಾ ಮೂಲ ದಾಖಲೆಗಳು ಬಡವರ ಪರವಾಗಿಯೇ ಇವೆ ಎಂದು ತಿಳಿಸಿದರು.

2003ರಿಂದ ಎನ್. ಪ್ರತಾಪ್ ರೆಡ್ಡಿಯವರು ಗೂಂಡಾಗಿರಿ, ಬೆದರಿಕೆ ಹಾಗೂ ದೌರ್ಜನ್ಯಗಳ ಮೂಲಕ ರೈತರನ್ನು ಭೂಮಿಯಿಂದ ಹೊರಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ನ್ಯಾಯಾಲಯದ ಸ್ಟೇ ಇದ್ದರೂ ಸಹ ಕೋರ್ಟ್ ಆದೇಶವಿಲ್ಲದೆ ಭೂಮಿಗಳ ಗಡಿ ಗುರುತು ನಾಶಪಡಿಸಲಾಗಿದೆ ಜೇಸಿಬಿಗಳಿಂದ ಒತ್ತುವರಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್. ಪ್ರತಾಪ್ ರೆಡ್ಡಿ ಹಾಗೂ ಅವರ ಸಹಚರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಂಪೂರ್ಣ ತನಿಖೆ ನಡೆಸಬೇಕೆಂದು ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಅವರು ಆಗ್ರಹಿಸಿದ್ದು ಇಲ್ಲವಾದಲ್ಲಿ ಸಿಬಿಐಗೆ ವಹಿಸಲಿ ಎಂದು ಅಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಹೇಶ್, ಗೋಪಿ, ಕುಮಾರ್ ಸಮಠಲ್, ಮೋಹನ್ ಧಾರದಮಿಲ್, ವೀರೇಶ್, ಸಿದ್ದರಾಜು ಸೇರಿದಂತೆ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ