Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಎಂಜನಿಯರಿಂಗ್‌, ಅಗ್ರಿ, ನರ್ಸಿಂಗ್‌ನಲ್ಲಿ ಮೂವರು ಟಾಪರ್‌

ಬೆಂಗಳೂರು, ಮೇ 24: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ರಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾಗಬಹುದು ಎಂದು ಈ ವಾರ ಆರಂಭದಿಂದಲೂ ವಿದ್ಯಾರ್ಥಿಗಳು ಕಾಯುತ್ತಿದ್ದರು. ಇದೀಗ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್  ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಚಿವ ಸುಧಾಕರ್ ಹೇಳಿದರು.

ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್​​ಇ ಶಾಲೆಯ ಭವೇಶ್ ಜಯಂತಿ (98.67%) ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ (99.33%) ಎರಡನೇ ರ್ಯಾಂಕ್ ಗಳಿಸಿದ್ದಾರೆ ಎಂದು ಸಚಿವರು ತಿಳಿಸಿದರು. ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ರ್ಯಾಂಕ್ (99%) ಗಳಿಸಿದ್ದಾರೆ.

ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ಯಲಹಂಕ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಹೆಚ್​ಎಸ್​ಆರ್ ಲೇಔಟ್​​ನ ನ್ಯಾಷನಲ್ ಪಬ್ಲಿಕ್‌ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಂಗಳೂರಿನ ವಳಚ್ಚಿಲ್​ನ ಎಕ್ಸ್​ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ರ್ಯಾಂಕ್ ಗಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ