Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಅನುಮೋದನೆ

ಬೆಂಗಳೂರು, ಜೂನ್ 14: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇತ್ತೀಚೆಗೆ ಅನುಮೋದನೆ ನೀಡಿದೆ. ರಾಜ್ಯದ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿ ಬಹಳ ಸಮಯದಿಂದ ಬಾಕಿ ಉಳಿದಿತ್ತು. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಲ್ಲಿ ಪ್ರಾರಂಭವಾಗಿದ್ದರೂ, 2024-25 ಕ್ಕೆ ಈ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ.

ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿ ಇಲ್ಲಿಯವರೆಗೆ ಭರದಿಂದ ಸಾಗಿದೆ. ನೇಮಕ ಪ್ರಕ್ರಿಯೆಯನ್ನು ವೇಗಗೊಳಿಸಲು ಶಾಲಾ ಮಟ್ಟದಲ್ಲಿ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿಕೊಳ್ಳುವಂತೆ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ಹೆಚ್ಚಾಗಿ ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಅನ್ನು ನಿಭಾಯಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವುದರಿಂದ ಆ ವಿಷಯಗಳ ಶಿಕ್ಷಕರನ್ನೇ ಹೆಚ್ಚು ನೇಮಕ ಮಾಡಿಕೊಳ್ಳುವಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿ ಬಿಬಿ ಕಾವೇರಿ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್​ನಲ್ಲಿ ವಿದ್ಯಾರ್ಥಿಗಳು ಕಡಿಮೆ ಸಾಧನೆ ಮಾಡುವುದು ಕಂಡುಬಂದಿದೆ. ಈ ವಿಷಯಗಳಲ್ಲೇ ಹೆಚ್ಚಿನ ವೈಫಲ್ಯಗಳನ್ನು ಕಾಣುತ್ತಿದ್ದೇವೆ. ಹೀಗಾಗಿ ಈ ವಿಷಯಗಳ ಶಿಕ್ಷಕರ ನೇಮಕಕ್ಕೆ ಒತ್ತು ನೀಡಲು ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ವಿವಿಧ ವಿಷಯಗಳ ಖಾಲಿ ಹುದ್ದೆಗಳು ತಾಲೂಕಿನಿಂದ ತಾಲೂಕಿಗೆ ಬದಲಾಗುತ್ತವೆ ಮತ್ತು ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರು (ಡಿಡಿಪಿಐಗಳು) ನೇಮಕಾತಿಗೆ ಜವಾಬ್ದಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ