LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಕರ್ನಾಟಕ ಜಾನಪದಕ್ಕೆ ಅತ್ಯಂತ ಸುದೀರ್ಘ ಮತ್ತು ಶ್ರೀಮಂತ ಇತಿಹಾಸವಿದೆ.  ಸುಬ್ಬಣ್ಣ ಅಭಿಮತ

 ಬಳ್ಳಾರಿ. ಆ. 24:  ಬ್ರಿಟಿಷ್ ಬರಹಗಾರ 'ವಿಲಿಯಂ ಜಾನ್ ಥಾಮ್ಸ್' ಅವರು 1836 ರ ಆಗಸ್ಟ್ 22 ರಂದು ಮೊದಲ ಬಾರಿಗೆ "ಫೋಲ್ಕ್-ಲೋರ್" (Folklore) ಅಂದರೆ 'ಜಾನಪದ' ಎಂಬ ಪದವನ್ನು ಬಳಸಿದರು. ಈ ನೆನಪಿಗಾಗಿ ಪ್ರತಿವರ್ಷ ಆಗಸ್ಟ್ 22 ರಂದು ವಿಶ್ವ ಜಾನಪದ ದಿನವನ್ನು ಆಚರಿಸಲಾಗುತ್ತದೆ. ದೇಶ ಮತ್ತು ವಿದೇಶಗಳ ಪರಂಪರೆ, ಸಾಂಪ್ರದಾಯಿಕ ಕಲೆ, ಸಂಸ್ಕೃತಿ, ಜಾನಪದ ಗೀತೆಗಳು, ಕುಣಿತಗಳು, ಕಥೆಗಳು ಮತ್ತು ಆಚಾರ-ವಿಚಾರಗಳನ್ನು ಉಳಿಸಿ, ಬೆಳೆಸುವುದು ಅಲ್ಲದೆ ಕರ್ನಾಟಕದ ಜಾನಪದಕ್ಕೆ ಅತ್ಯಂತ ಸುದೀರ್ಘ ಮತ್ತು ಶ್ರೀಮಂತ ಇತಿಹಾಸವಿದೆ. ಇತ್ತೀಚಿನ ದಿನಗಳಲ್ಲಿ ಅಳಿವಿನ ಅಂಚಿನಲ್ಲಿರುವ ತೊಗಲುಗೊಂಬೆ ಆಟ, ಕೋಲಾಟ, ಸಣ್ಣಾಟ, ಸಂಪ್ರದಾಯ ಪದ, ಬೀಸುವ ಪದ, ಬಿಸೋಪದ, ಡೊಳ್ಳಿನ ಪದ, ಚೌಡಿಕಿ ಪದಗಳು ಹೀಗೆ ಗ್ರಾಮೀಣ ಭಾಗದ ಜಾನಪದ ಕ್ರೀಡೆಗಳ ಬಗ್ಗೆ ಅರಿವು ಮೂಡಿಸಲು ಮುಂದಿನ ಜನಾಂಗಕ್ಕೆ ಪರಿಚಯಿಸುವ ಉದ್ದೇಶದಿಂದ ವಿಶ್ವ ಜಾನಪದ ದಿನಾಚರಣೆ ಆಚರಿಸಲಾಗುತ್ತದೆ  ಎಂದು ತೊಗಲು ಗೊಂಬೆ  ಕಲಾವಿದ ಸುಬ್ಬಣ್ಣ ಅಭಿಪ್ರಾಯಪಟ್ಟರು.
ಅವರು ನಗರದ ಎಸ್ಎನ್ ಪೇಟೆಯ ಶ್ರೀ ಕೃಷ್ಣ ಪ್ಲಾಜಾ ಸಭಾಂಗಣದಲ್ಲಿ ವೀಣಾಶ್ರೀ ಮಹಿಳಾ ಕಲಾ ಸಂಘ ಸಂಗನಕಲ್ಲು ಇವರು ಹಮ್ಮಿಕೊಂಡಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದವರು.
 ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ  ತುಂಗ  ಗಂಗಾ ಕಲಾ ಟ್ರಸ್ಟ್ ನ ಅಧ್ಯಕ್ಷರಾದ ನಾಗಭೂಷಣ್ ಭಾಗವಹಿಸಿ ಮಾತನಾಡಿ,  ಈ ನೆಲದ ಕಲೆಯ ಸಂಸ್ಕೃತಿ ಪರಂಪರೆಯ ಅಡಿಪಾಯವೇ ಜಾನಪದ  ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವೀಣಾಶ್ರೀ ಮಹಿಳಾ ಕಲಾ ಸಂಘದ ಅಧ್ಯಕ್ಷೆ   ಉಷಾ, ಚೌಡಕಿ ಕಲಾವಿದ ಲಕ್ಷ್ಮಣ, ತಾಂಡವ ನೃತ್ಯ ಕಲಾ ಟ್ರಸ್ಟಿನ ಅಧ್ಯಕ್ಷರಾದ ವಿನಯ್ ಮತ್ತು ಇತರರು  ಉಪಸ್ಥಿತರಿದ್ದರು
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿರುಗುಪ್ಪದ ಚೌಡಕಿ ಲಕ್ಷ್ಮಣ ಇವರಿಂದ ಚೌಡಕಿ ಪದಗಳ ಗಾಯನ ಎಲ್ಲರನ್ನೂ ಆಕರ್ಷಿಸುವಂತೆ ಮಾಡಿತು.
ಬಳ್ಳಾರಿಯ ಅಮೃತ ತಂಡದವರಿಂದ ಜಾನಪದ ನೃತ್ಯ ಕಾರ್ಯಕ್ರಮಕ್ಕೆ ಮೆರಗನ್ನು ತಂದರೆ ವೀರೇಶ ದಳವಾಯಿವರಿಂದ ಜಾನಪದ ಗೀತೆ ಕಾರ್ಯಕ್ರಮ ಎಲ್ಲರನ್ನು ಮನರಂಜಿಸಿತು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್