LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ನಾಲ್ಕು ವರ್ಷಗಳ ಪದವಿ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ

ಬೆಂಗಳೂರು, ಮೇ 9: ಕಾಲೇಜು ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಪದವಿ ಆನರ್ಸ್​​ ಅಧ್ಯಯನಕ್ಕೆ 2024-25ನೇ ಶೈಕ್ಷಣಿಕ ವರ್ಷದಿಂದ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಇದರೊಂದಿಗೆ, ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಅಳವಡಿಸಿಕೊಳ್ಳುವುದಕ್ಕಿಂತಲೂ ಮೊದಲು, ಅಂದರೆ 2021-22 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಸಾಂಪ್ರದಾಯಿಕ ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಕರ್ನಾಟಕ ಮರಳಿದಂತಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಂಡಿತ್ತು. ಆದರೆ, ಕಳೆದ ವರ್ಷ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು.

ಉನ್ನತ ಶಿಕ್ಷಣ ಇಲಾಖೆ ಹೇಳುವುದೇನು?

ಇದೀಗ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಉನ್ನತ ಶಿಕ್ಷಣ ಇಲಾಖೆ, ಎಸ್​​​ಇಪಿ ಆಯೋಗದ ವಿಸ್ತೃತ ಸಮಾಲೋಚನೆಯನ್ನು ಆಧರಿಸಿದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಐತಿಹಾಸಿಕ ಅನುಭವ, ವಿದ್ಯಾರ್ಥಿಗಳ ಒಟ್ಟಾರೆ ಹಿತಾಸಕ್ತಿ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ವಿವಿಧ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಸಮಾನ ಅವಕಾಶವನ್ನು ನೀಡುವುದನ್ನು ಗಮನದಲ್ಲಿಟ್ಟುಕೊಂಡು ಎಸ್​​​ಇಪಿ ಆಯೋಗ ಶಿಫಾರಸುಗಳ್ನು ಮಾಡಿದೆ ಎಂದು ಇಲಾಖೆ ಹೇಳಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್