Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ ಕರ್ನಾಟಕ ಸರ್ಕಾರ; ರಾಜ್ಯದಲ್ಲಿ 7.5 ಲಕ್ಷ ಕೋಟಿ ರೂಪಾಯಿ ಹೂಡಿಕೆ ಗುರಿ

ಬೆಂಗಳೂರು: ರಾಜ್ಯ ಸರ್ಕಾರ ನೂಚನ ಕೈಗಾರಿಕಾ ನೀತಿ 2025-29 ಅನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮಂಗಳವಾರ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ಮುಂದಿನ 5 ವರ್ಷಗಳಲ್ಲಿ ರಾಜ್ಯದ ಕೈಗಾರಿಕಾ ಬೆಳವಣಿಗೆ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಹತ್ತರ ಗುರಿಯನ್ನೊಳಗೊಂಡ ನೂತನ ಕೈಗಾರಿಕಾ ನೀತಿಯನ್ನು ಅನಾವರಣಗೊಳಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ನೂತನ ಕೈಗಾರಿಕಾ ನೀತಿಯನ್ನು ಅನಾವರಣಗೊಳಿಸಿದರು.

ಹೊಸ ನೀತಿಯಲ್ಲಿರುವ ಅಂಶಗಳನ್ನು ವಿವರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಈ ನೀತಿಯು ರಾಜ್ಯದಲ್ಲಿ 2029 ರ ವೇಳೆಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಈ ನೀತಿಯ ಮೂಲಕ, ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮತ್ತು ಏಕ ಗವಾಕ್ಷಿ ವ್ಯವಸ್ಥೆಯ ಮೂಲಕ ಸುವ್ಯವಸ್ಥಿತಗೊಳಿಸಲಾಗುತ್ತದೆ ಎಂದು ಹೇಳಿದರು.

ಇದಲ್ಲದೆ, ಮುಂದಿನ 5 ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರು. ಬಂಡಾವಳ ತರುವಂಥ ಕ್ರಮಗಳನ್ನು ಕೈಗೊಳ್ಳುವುದು ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಸುವುದು, ಸನ್‌ರೈಸ್ ವಲಯದಲ್ಲಿ ರಾಜ್ಯವನ್ನು ದೇಶಕ್ಕೆ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ನಗರಗಳಲ್ಲಿ, ಹಿಂದುಳಿದ, ಅತೀ ಹಿಂದುಳಿದ ಜಿಲ್ಲೆ-ತಾಲೂಕುಗಳಲ್ಲಿ ಹೆಚ್ಚಿನ ಹೂಡಿಕೆಗೆ ಒತ್ತು ನೀಡಿ, ಅದಕ್ಕಾಗಿ ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡುವುದಾಗಿ ನೂತನ ಕೈಗಾರಿಕಾ ನೀತಿಯಲ್ಲಿ ತಿಳಿಸಲಾಗಿದೆ ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ