Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಮಹಿಳಾ ಸಂಘದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಳಗಾವಿ : ಬೆಳಗಾವಿಯ ಕನ್ನಡ ಮಹಿಳಾ ಸಂಘದಿಂದ ಮಂಗಳವಾರ ಕರ್ನಾಟಕ ರಾಜ್ಯೋತ್ಸವವನ್ನು ಅಧ್ಧೂರಿಯಾಗಿ ಆಚರಿಸಲಾಯಿತು.


ಟಿಳಕವಾಡಿ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಾಹಿತಿ ಸಿ ಕೆ ಜೋರಾಪುರ , ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಗಣೇಶ ರೋಕಡೆ, ಯುವ ಕರ್ನಾಟಕ ರಕ್ಷಣಾ ವೇದಿಕೆಯ ಶಿವು ದೇವರವರ , ಶಿಕ್ಷಕಿ ಶುಭಾ ಹೆಗಡೆ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಸಿ.ಕೆ ಜೋರಾಪುರ ಮಹಾಜನ ವರದಿಯ ಕುರಿತು ಮಾತನಾಡಿದರು.ದೀಪಕ ಗುಡಗನಟ್ಟಿ,  ಇಂತಹ ಸಂಘ- ಸಂಸ್ಥೆಗಳು ಸದ್ದಿಲ್ಲದೇ ಕನ್ನಡದ ಕೆಲಸ ಮಾಡುತ್ತಿವೆ. ನಾವು ನಿಮ್ಮೊಂದಿಗೆ ಯಾವಾಗಲೂ ಇದ್ದೇವೆ ಎಂದರು.


ಶಿವು ದೇವರವರ ಅವರು ಕನ್ನಡಮ್ಮನ ಸೇವೆಗಾಗಿ ನಾವೆಲ್ಲಾ ಕಟಿಬಧ್ಧರಾಗಿದ್ದೇವೆ ಎಂದರು. ಸಂಘದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ವಿಶಾಖಾ ದೇಶಪಾಂಡೆ ಪ್ರಾರ್ಥನಾ ಗೀತೆ ಹಾಡಿದರು. ಸಂಘದ ಅಧ್ಯಕ್ಷೆ ಮಾಹೇಶ್ವರಿ ಗಾಳಿ ಸ್ವಾಗತಿಸಿದರು. ಉಪಾಧ್ಯಕ್ಷೆ ಶೀಲಾ ದೇಶಪಾಂಡೆ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಶಾಂತಾ ಆಚಾರ್ಯ ಅತಿಥಿಗಳ ಪರಿಚಯ ಮಾಡಿದರು. ಭಾರತಿ ವಡವಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು.

ಸಲೋನಿ ರೇವಣಕರ ವಂದಿಸಿದರು. ರಜನಿ ರೇವಣಕರ ಕಾರ್ಯಕ್ರಮ ನಿರ್ವಹಿಸಿದರು.

ಕನ್ನಡ ಮಹಿಳಾ ಸಂಘದ ಸ್ಥಾಪಕರಾದ ರಂಜನಾ ನಾಯಕ, ರಾಜಶ್ರೀ ಕೆಂಭಾವಿ, ಹಿರಿಯ ಸದಸ್ಯೆಯರಾದ ಮಂದಾಕಿನಿ ಕುಲಕರ್ಣಿ , ಮಂಗಲಾ ಧಾರವಾಡಕರ, ಸುಧಾ ರೊಟ್ಟಿ , ವೀಣಾ ದೇಶಪಾಂಡೆ, ಬೀನಾ ರಾವ್ , ವಿಜಯಮಾಲಾ ಹರ್ದಿ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ