LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ವಿವಾದಿತ ಪಠ್ಯ ವಾಪಸ್ ಪಡೆದ ಕರ್ನಾಟಕ ವಿವಿ: ಪರೀಕ್ಷೆ ಮುಂದೂಡಿಕೆ

ಧಾರವಾಡ, ಜನವರಿ 24: ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ  ಬಿಎ ಪದವಿ ಪುಸ್ತಕದಲ್ಲಿನ ಪಠ್ಯದ ವಿಚಾರ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದ ಹಿನ್ನಲೆ ವಿವಾದಿತ ನಾಲ್ಕನೇ ಅಧ್ಯಾಯ ಕೈಬಿಟ್ಟು ಪಠ್ಯಪುಸ್ತಕ ಮುಂದುವರಿಕೆ ವಿವಿ ಮುಂದಾಗಿದ್ದು, ಕವಿವಿ ಮೌಲ್ಯಮಾಪನ ಕುಲಸಚಿವರಿಂದ ಆದೇಶ ಹೊರಡಿಸಲಾಗಿದೆ.










ಘಟಕ-1ರ ನಾಲ್ಕನೆಯ ಅಧ್ಯಾಯದ ಈ ಲೇಖನವನ್ನು ತಕ್ಷಣದಿಂದ ಜಾರಿಗೆ ಬರುವ ಕೈಬಿಟ್ಟು (ಹೊರತುಪಡಿಸಿ) ಬೆಳಗು-1 ಪಠ್ಯಪುಸ್ತಕವನ್ನು ಮುಂದುವರೆಸಲು ನಿರ್ಧರಿಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ತತ್ಸಮಂಭಂಧಿತ ಪೂರಕ ಕಾರ್ಯಗಳನ್ನು ಜಾರಿ ಮಾಡುವುದಾಗಿ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಪಠ್ಯ ವಿವಾದ ಹಿನ್ನೆಲೆ ಜ.29ರಂದು ನಡೆಯಬೇಕಿದ್ದ ಎನ್‌ಇಪಿ ಸೆಮಿಸ್ಟರ್-1 ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿವಾದಿತ ಪಠ್ಯ ಬೆಳಗು-1 ಕೃತಿ ಆಧಾರಿತ ಪ್ರಶ್ನೆ ಪತ್ರಿಕೆವಾಗಿತ್ತು. ಆದರೆ ಬೆಳಗು-1 ಕೃತಿಯ ನಾಲ್ಕನೇ ಪಾಠ ವಿವಾದದ ಬೆನ್ನಲ್ಲಿಯೇ ಪಾಠ ವಾಪಸ್ ಪಡೆದಿದ್ದ ಕವಿವಿ, ಈಗ ಪರೀಕ್ಷೆ ಸಹ ಮುಂದೂಡಿದೆ.

ಬಿಎ, ಬಿಪಿಎ ಮ್ಯೂಸಿಕ್‌, ಬಿಎಫ್​ಎ, ಬಿಎಸ್​ಡಬ್ಲ್ಯೂ, ಬಿವಿಎ, BSc(ಹೋಮ್ ಸೈನ್ಸ್), ಬಿಟಿಟಿಎಂ ಈ ಎಲ್ಲಾ ಕೋರ್ಸ್‌ಗಳಿಗೆ ಬೆಳಗು-1 ಕೃತಿ ಸೇರಿತ್ತು. ಆದರೆ ಇದೀಗ ತಾಂತ್ರಿಕ ಕಾರಣದ ನೆಪ ಹೇಳಿ ಪರೀಕ್ಷೆ ಮುಂದೂಡಿಕೆ ಮಾಡಿ ಕವಿವಿ ಮೌಲ್ಯಮಾಪನ ಕುಲಸಚಿವರಿಂದ ಆದೇಶ ಹೊರಡಿಸಿದ್ದು, ಮುಂದಿನ ದಿನಾಂಕ ನಂತರ ತಿಳಿಸುವುದಾಗಿ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ