Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಾದಿತ ಪಠ್ಯ ವಾಪಸ್ ಪಡೆದ ಕರ್ನಾಟಕ ವಿವಿ: ಪರೀಕ್ಷೆ ಮುಂದೂಡಿಕೆ

ಧಾರವಾಡ, ಜನವರಿ 24: ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ  ಬಿಎ ಪದವಿ ಪುಸ್ತಕದಲ್ಲಿನ ಪಠ್ಯದ ವಿಚಾರ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದ ಹಿನ್ನಲೆ ವಿವಾದಿತ ನಾಲ್ಕನೇ ಅಧ್ಯಾಯ ಕೈಬಿಟ್ಟು ಪಠ್ಯಪುಸ್ತಕ ಮುಂದುವರಿಕೆ ವಿವಿ ಮುಂದಾಗಿದ್ದು, ಕವಿವಿ ಮೌಲ್ಯಮಾಪನ ಕುಲಸಚಿವರಿಂದ ಆದೇಶ ಹೊರಡಿಸಲಾಗಿದೆ.










ಘಟಕ-1ರ ನಾಲ್ಕನೆಯ ಅಧ್ಯಾಯದ ಈ ಲೇಖನವನ್ನು ತಕ್ಷಣದಿಂದ ಜಾರಿಗೆ ಬರುವ ಕೈಬಿಟ್ಟು (ಹೊರತುಪಡಿಸಿ) ಬೆಳಗು-1 ಪಠ್ಯಪುಸ್ತಕವನ್ನು ಮುಂದುವರೆಸಲು ನಿರ್ಧರಿಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ತತ್ಸಮಂಭಂಧಿತ ಪೂರಕ ಕಾರ್ಯಗಳನ್ನು ಜಾರಿ ಮಾಡುವುದಾಗಿ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಪಠ್ಯ ವಿವಾದ ಹಿನ್ನೆಲೆ ಜ.29ರಂದು ನಡೆಯಬೇಕಿದ್ದ ಎನ್‌ಇಪಿ ಸೆಮಿಸ್ಟರ್-1 ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿವಾದಿತ ಪಠ್ಯ ಬೆಳಗು-1 ಕೃತಿ ಆಧಾರಿತ ಪ್ರಶ್ನೆ ಪತ್ರಿಕೆವಾಗಿತ್ತು. ಆದರೆ ಬೆಳಗು-1 ಕೃತಿಯ ನಾಲ್ಕನೇ ಪಾಠ ವಿವಾದದ ಬೆನ್ನಲ್ಲಿಯೇ ಪಾಠ ವಾಪಸ್ ಪಡೆದಿದ್ದ ಕವಿವಿ, ಈಗ ಪರೀಕ್ಷೆ ಸಹ ಮುಂದೂಡಿದೆ.

ಬಿಎ, ಬಿಪಿಎ ಮ್ಯೂಸಿಕ್‌, ಬಿಎಫ್​ಎ, ಬಿಎಸ್​ಡಬ್ಲ್ಯೂ, ಬಿವಿಎ, BSc(ಹೋಮ್ ಸೈನ್ಸ್), ಬಿಟಿಟಿಎಂ ಈ ಎಲ್ಲಾ ಕೋರ್ಸ್‌ಗಳಿಗೆ ಬೆಳಗು-1 ಕೃತಿ ಸೇರಿತ್ತು. ಆದರೆ ಇದೀಗ ತಾಂತ್ರಿಕ ಕಾರಣದ ನೆಪ ಹೇಳಿ ಪರೀಕ್ಷೆ ಮುಂದೂಡಿಕೆ ಮಾಡಿ ಕವಿವಿ ಮೌಲ್ಯಮಾಪನ ಕುಲಸಚಿವರಿಂದ ಆದೇಶ ಹೊರಡಿಸಿದ್ದು, ಮುಂದಿನ ದಿನಾಂಕ ನಂತರ ತಿಳಿಸುವುದಾಗಿ ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ