Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಕರಾಟೆ ಶಿಕ್ಷಕರ ಸಂಘ : ಪ್ರಧಾನ ಕಾರ್ಯದರ್ಶಿಯಾಗಿ ಕಟ್ಟೇಸ್ವಾಮಿ ಆಯ್ಕೆ

ಉಡುಪಿ,ಮಾ,31:: ರಾಜ್ಯ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಹೊಸ ಕಾರ್ಯಕಾರಿ ಸಮಿತಿ ರಚನೆಗೊಂಡಿದೆ.

ಇತ್ತೀಚೆಗೆ ಉಡುಪಿಯ ದುರ್ಗಾ ಇಂಟರನ್ಯಾಷನಲ್ ಹೋಟೇಲ್‌ನಲ್ಲಿ ನಡೆದ ಮಹಾಸಭೆಯಲ್ಲಿ ಸಂಘದ ನಿಯಮಾವಳಿಗಳ ಪ್ರಕಾರ ಚುನಾವಣೆಯನ್ನು ನಡೆಸಲಾಯಿತು. ಈ ಚುನಾವಣೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕರಾಟೆ ಶಿಕ್ಷಕರು ಹಾಗೂ ಪ್ರತಿನಿಧಿಗಳು ಉತ್ಸಾಹದಿಂದ ಭಾಗವಹಿಸಿದರು.

ಪಾರದರ್ಶಕ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆದ ಚುನಾವಣೆಯಲ್ಲಿ ಮಂಗಳೂರಿನ ಮಹಮ್ಮದ್ ನದೀಮ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಬಳ್ಳಾರಿ ಜಿಲ್ಲೆಯ ಕಟ್ಟೇಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇದರ ಜೊತೆಗೆ ಉಪಾಧ್ಯಕ್ಷರಾಗಿ ಬೆಂಗಳೂರಿನ ಸುಂದರಮ್, ಉಡುಪಿಯ ಸತೀಶ್ ಬೆಳ್ಮಣ್ಣು, ಕಾರವಾರದ ವಿಶಾಲ್, ಕೋಶಾಧಿಕಾರಿಯಾಗಿ ವಿಜಯಪುರದ ಶಿವಕುಮಾರ್ ಶಾರದಳ್ಳಿ, ರಾಜ್ಯ ವಕ್ತಾರರಾಗಿ ಕೊಪ್ಪಳದ ಮೌನೇಶ್ ವಡ್ಡಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿಣಿ ಸಭೆಯ ಸದಸ್ಯರಾಗಿ ವಿಜಯಪುರದ ಸುಭಾಷ್ ಮುತ್ಕೂರ್ ಹಾಗೂ ದಾವಣಗೆರೆಯ ಭಾಷ್ ಅವರುಗಳನ್ನೂ ಆಯ್ಕೆ ಮಾಡಲಾಗಿದೆ. ಇತರ ಪದಾಧಿಕಾರಿಗಳನ್ನೂ ಈ ಸಂದರ್ಭದಲ್ಲಿ ನೇಮಕ ಮಾಡಲಾಗಿದೆ.

ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ರಾಜ್ಯದ ಕರಾಟೆ ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿದ್ದು, ತರಬೇತಿ ಗುಣಮಟ್ಟವನ್ನು ಹೆಚ್ಚಿಸುವುದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ರಾಜ್ಯ ಮಟ್ಟದ ಕ್ರೀಡಾಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಸಂಘದ ಹಿರಿಯರು ಹಾಗೂ ಸದಸ್ಯರು ಹೊಸ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸಿ, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭಹಾರೈಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ