Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿದ ಪರಿಷತ್ ಚುನಾವಣಾ ಕಣ: ಕೈ ಅಭ್ಯರ್ಥಿಗಳ ಬಿರುಸಿನ ಪ್ರಚಾರ

ಬೆಂಗಳೂರು,11: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಪರಿಷತ್ ಚುನಾವಣೆ ಕಾವು ಪಡೆದಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ತನ್ನ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಜೂನ್​ 3ರಂದು ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಮೇ 10ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಮೇ 16 ಆಗಿದೆ. ನಾಮಪತ್ರ ಪರಿಶೀಲನೆ ಮೇ 17ಕ್ಕೆ ನಡೆಯಲಿದೆ. ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್ ಪಕ್ಷ ಮೇಲ್ಮನೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಐವರು ಕೈ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದರು. ಅದರಂತೆ ಕಾಂಗ್ರೆಸ್ ನಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ, ಆಗ್ನೇಯ ಶಿಕ್ಷಕ ಕ್ಷೇತ್ರದಿಂದ ಕೆ. ಬಿ. ಶ್ರೀನಿವಾಸ್‌, ನೈಋತ್ಯ ಶಿಕ್ಷಕ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್‌ ಹೆಸರು ಘೋಷಿಸಲಾಗಿದೆ. ಇನ್ನು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಬ್ಬಿರುವ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಮರಿತಿಬ್ಬೇಗೌಡ ಅಭ್ಯರ್ಥಿಯಾಗಿರಲಿದ್ದಾರೆ. ಹೀಗಾಗಿ ಕೈ ಅಭ್ಯರ್ಥಿಗಳು ಈಗಾಗಲೇ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರವನ್ನು ಆರಂಭಿಸಿ, ಬಿಜೆಪಿ-ಜೆಡಿಎಸ್ ನಿಂದ ಒಂದು ಹೆಜ್ಜೆ ಮುಂದಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ