LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾವೇರಿದ ಪರಿಷತ್ ಚುನಾವಣಾ ಕಣ: ಕೈ ಅಭ್ಯರ್ಥಿಗಳ ಬಿರುಸಿನ ಪ್ರಚಾರ

ಬೆಂಗಳೂರು,11: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಪರಿಷತ್ ಚುನಾವಣೆ ಕಾವು ಪಡೆದಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ತನ್ನ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಜೂನ್​ 3ರಂದು ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಮೇ 10ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಮೇ 16 ಆಗಿದೆ. ನಾಮಪತ್ರ ಪರಿಶೀಲನೆ ಮೇ 17ಕ್ಕೆ ನಡೆಯಲಿದೆ. ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್ ಪಕ್ಷ ಮೇಲ್ಮನೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಐವರು ಕೈ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದರು. ಅದರಂತೆ ಕಾಂಗ್ರೆಸ್ ನಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ, ಆಗ್ನೇಯ ಶಿಕ್ಷಕ ಕ್ಷೇತ್ರದಿಂದ ಕೆ. ಬಿ. ಶ್ರೀನಿವಾಸ್‌, ನೈಋತ್ಯ ಶಿಕ್ಷಕ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್‌ ಹೆಸರು ಘೋಷಿಸಲಾಗಿದೆ. ಇನ್ನು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಬ್ಬಿರುವ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಮರಿತಿಬ್ಬೇಗೌಡ ಅಭ್ಯರ್ಥಿಯಾಗಿರಲಿದ್ದಾರೆ. ಹೀಗಾಗಿ ಕೈ ಅಭ್ಯರ್ಥಿಗಳು ಈಗಾಗಲೇ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರವನ್ನು ಆರಂಭಿಸಿ, ಬಿಜೆಪಿ-ಜೆಡಿಎಸ್ ನಿಂದ ಒಂದು ಹೆಜ್ಜೆ ಮುಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ