Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಎಂಟ್ರಿ: ಆಪ್‌ ಅಭ್ಯರ್ಥಿಗಳ ಪರ ಪ್ರಚಾರ

ನವದೆಹಲಿ,25: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಪತ್ನಿ ಸುನಿತಾ ಕೇಜ್ರಿವಾಲ್‌ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಎಎಪಿ ನಿರ್ಧರಿಸಿದೆ.

ದೆಹಲಿ ಮದ್ಯ ಹಗರಣ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಹಿನ್ನಲೆ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆಪ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಪರ ಕೊಂಡ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ವಾರಾಂತ್ಯ ಸುನಿತಾ ಅವರ ಮೊದಲ ರ್‍ಯಾಲಿ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಿರುವ ಉಳಿದ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಸುನಿತಾ ರೋಡ್ ಶೋ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಎಎಪಿ, ಪೂರ್ವ ದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ನವದೆಹಲಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಗುಜರಾತ್ ಮತ್ತು ಪಂಜಾಬ್‌ ರಾಜ್ಯಗಳಲ್ಲೂ ಎಎಪಿ ಅಭ್ಯರ್ಥಿಗಳ ಪರ ಸುನಿತಾ ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಜರಾತ್‌ನ ಎಎಪಿ ಘಟಕದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಸುನಿತಾ ಹೆಸರಿದೆ.

ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಸುನೀತಾ ಕೇಜ್ರಿವಾಲ್ ಅವರು ವೀಡಿಯೊ ಸಂದೇಶಗಳು ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಮುನ್ನಲೆಗೆ ಬಂದಿದ್ದಾರೆ. ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯಲ್ಲಿ ವಿಪಕ್ಷಗಳು ನಡೆಸಿದ ಸಮಾವೇಶದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಇತ್ತಿಚೇಗೆ ಛತ್ತಿಸ್‌ಘಡದಲ್ಲಿ ನಡೆದ INDIA ಒಕ್ಕೂಟದ ಸಭೆಯಲ್ಲಿ ಅವರು ಪಕ್ಷವನ್ನು ಪ್ರತಿನಿಧಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ