LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಾದೇಶಿಕ ಅಸಮತೋಲನ: ತಲಾದಾಯ,ಹಸಿರು ವ್ಯಾಪ್ತಿ ಪರಿಗಣಿಸಲು ಖಂಡ್ರೆ ಸಲಹೆ



ಬೆಂಗಳೂರು, ಡಿ.4: ಪ್ರಾದೇಶಿಕ ಅಸಮತೋಲನೆಯ ನಿವಾರಣೆಯ ಮಾನದಂಡದಲ್ಲಿ ತಲಾದಾಯ ಮತ್ತು ಪ್ರದೇಶದ ಹಸಿರು ವ್ಯಾಪ್ತಿಯನ್ನೂ ಪರಿಗಣಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.

ವಿಕಾಸಸೌಧದಲ್ಲಿಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷರು ಹಾಗೂ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ನಿಯೋಗದೊಂದಿಗೆ ಸಮಾಲೋಚಿಸಿದ ಅವರು, ಅರಣ್ಯ ಇರುವ ಪ್ರದೇಶಗಳಲ್ಲಿ ಕೆಂಪು ಪ್ರವರ್ಗದ ಕೈಗಾರಿಕೆಗಳ ಸ್ಥಾಪನೆ ಸಾಧ್ಯವಿಲ್ಲ ಹೀಗಾಗಿ ಪಶ್ಚಿಮಘಟ್ಟ ಪ್ರದೇಶಗಳಿಗೆ ಪ್ರೋತ್ಸಾಹಕ ನೀಡುವ ಅಗತ್ಯವಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆಯ ವ್ಯಾಪ್ತಿ ಅತ್ಯಂತ ಕಡಿಮೆ ಇದೆ. ಇಲ್ಲಿ ವೃಕ್ಷ ಸಂವರ್ಧನೆಗೂ ಪ್ರಾದೇಶಿಕ ಅಸಮತೋಲನ ನಿವಾರಣೆಯಲ್ಲಿ ಆದ್ಯತೆ ನೀಡಬೇಕು ಮತ್ತು ಹೆಚ್ಚಿನ ಹಣ ಒದಗಿಸಬೇಕು ಎಂದು ಸಲಹೆ ನೀಡಿದರು.

ಅಸಮತೋಲನ ನಿವಾರಣೆಗೆ ಹಂಚಿಕೆಯಾಗುವ ಹಣವನ್ನು ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕೆ, ಶಾಲಾ, ಕಾಲೇಜು, ವಿಶ್ವವಿದ್ಯಾಲಯ ಸ್ಥಾಪನೆಗೆ ಮಾತ್ರವೇ ಬಳಕೆ ಮಾಡಬೇಕು. ಇತರ ಯಾವುದೇ ಯೋಜನೆಗಳಿಗೆ ಬಳಕೆಯಾದ ಹಣವನ್ನು ಈ ಬಾಬ್ತಿನಲ್ಲಿ ತೋರಿಸಬಾರದು ಎಂಬ ಸಲಹೆ ನೀಡಿದರು.

ಸಮಿತಿಯ ಅಧ್ಯಕ್ಷ ಗೋವಿಂದರಾವ್, ರಾಜಸ್ತಾನದ ನಂತರ ಅತಿ ಹೆಚ್ಚು ಬರಡು ಭೂಮಿ ಇರುವ ರಾಜ್ಯ ಕರ್ನಾಟಕವಾಗಿದ್ದು, ಈ ಸಲಹೆ ಉಪಯುಕ್ತವಾಗಿದೆ ಎಂದರು.

ಕಲ್ಯಾಣ ಕರ್ನಾಟಕದ ಬಹುಪಾಲು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೃಷಿಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾಗುತ್ತಿದ್ದು, ಹಲವರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ಅಂಶವನ್ನೂ ಅಸಮತೋನದ ಸೂಚ್ಯಂಕದಲ್ಲಿ ಪರಿಗಣಿಸಬೇಕು ಎಂದರು.

ಪ್ರೊ. ರಾವ್ ಮಾತನಾಡಿ ರೈತರು ಬೆಳೆ ಪದ್ಧತಿಯ ಬದಲಾವಣೆ ಮಾಡುವ ಅಗತ್ಯವಿದ್ದು, ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂಬ ಅಭಿಪ್ರಾಯ ಮುಂದಿಟ್ಟರು.

ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಡಾ. ಸೂರ್ಯನಾರಾಯಣ್, ಡಾ. ವಾಸುದೇವ ಸೇಡಂ, ಎನ್.ಟಿ. ಬಾಗಲಕೋಟಿ, ಡಿ. ಚಂದ್ರಶೇಖರಯ್ಯ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್