Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾದೇಶಿಕ ಅಸಮತೋಲನ: ತಲಾದಾಯ,ಹಸಿರು ವ್ಯಾಪ್ತಿ ಪರಿಗಣಿಸಲು ಖಂಡ್ರೆ ಸಲಹೆ



ಬೆಂಗಳೂರು, ಡಿ.4: ಪ್ರಾದೇಶಿಕ ಅಸಮತೋಲನೆಯ ನಿವಾರಣೆಯ ಮಾನದಂಡದಲ್ಲಿ ತಲಾದಾಯ ಮತ್ತು ಪ್ರದೇಶದ ಹಸಿರು ವ್ಯಾಪ್ತಿಯನ್ನೂ ಪರಿಗಣಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.

ವಿಕಾಸಸೌಧದಲ್ಲಿಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷರು ಹಾಗೂ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ನಿಯೋಗದೊಂದಿಗೆ ಸಮಾಲೋಚಿಸಿದ ಅವರು, ಅರಣ್ಯ ಇರುವ ಪ್ರದೇಶಗಳಲ್ಲಿ ಕೆಂಪು ಪ್ರವರ್ಗದ ಕೈಗಾರಿಕೆಗಳ ಸ್ಥಾಪನೆ ಸಾಧ್ಯವಿಲ್ಲ ಹೀಗಾಗಿ ಪಶ್ಚಿಮಘಟ್ಟ ಪ್ರದೇಶಗಳಿಗೆ ಪ್ರೋತ್ಸಾಹಕ ನೀಡುವ ಅಗತ್ಯವಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆಯ ವ್ಯಾಪ್ತಿ ಅತ್ಯಂತ ಕಡಿಮೆ ಇದೆ. ಇಲ್ಲಿ ವೃಕ್ಷ ಸಂವರ್ಧನೆಗೂ ಪ್ರಾದೇಶಿಕ ಅಸಮತೋಲನ ನಿವಾರಣೆಯಲ್ಲಿ ಆದ್ಯತೆ ನೀಡಬೇಕು ಮತ್ತು ಹೆಚ್ಚಿನ ಹಣ ಒದಗಿಸಬೇಕು ಎಂದು ಸಲಹೆ ನೀಡಿದರು.

ಅಸಮತೋಲನ ನಿವಾರಣೆಗೆ ಹಂಚಿಕೆಯಾಗುವ ಹಣವನ್ನು ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕೆ, ಶಾಲಾ, ಕಾಲೇಜು, ವಿಶ್ವವಿದ್ಯಾಲಯ ಸ್ಥಾಪನೆಗೆ ಮಾತ್ರವೇ ಬಳಕೆ ಮಾಡಬೇಕು. ಇತರ ಯಾವುದೇ ಯೋಜನೆಗಳಿಗೆ ಬಳಕೆಯಾದ ಹಣವನ್ನು ಈ ಬಾಬ್ತಿನಲ್ಲಿ ತೋರಿಸಬಾರದು ಎಂಬ ಸಲಹೆ ನೀಡಿದರು.

ಸಮಿತಿಯ ಅಧ್ಯಕ್ಷ ಗೋವಿಂದರಾವ್, ರಾಜಸ್ತಾನದ ನಂತರ ಅತಿ ಹೆಚ್ಚು ಬರಡು ಭೂಮಿ ಇರುವ ರಾಜ್ಯ ಕರ್ನಾಟಕವಾಗಿದ್ದು, ಈ ಸಲಹೆ ಉಪಯುಕ್ತವಾಗಿದೆ ಎಂದರು.

ಕಲ್ಯಾಣ ಕರ್ನಾಟಕದ ಬಹುಪಾಲು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೃಷಿಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾಗುತ್ತಿದ್ದು, ಹಲವರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ಅಂಶವನ್ನೂ ಅಸಮತೋನದ ಸೂಚ್ಯಂಕದಲ್ಲಿ ಪರಿಗಣಿಸಬೇಕು ಎಂದರು.

ಪ್ರೊ. ರಾವ್ ಮಾತನಾಡಿ ರೈತರು ಬೆಳೆ ಪದ್ಧತಿಯ ಬದಲಾವಣೆ ಮಾಡುವ ಅಗತ್ಯವಿದ್ದು, ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂಬ ಅಭಿಪ್ರಾಯ ಮುಂದಿಟ್ಟರು.

ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಡಾ. ಸೂರ್ಯನಾರಾಯಣ್, ಡಾ. ವಾಸುದೇವ ಸೇಡಂ, ಎನ್.ಟಿ. ಬಾಗಲಕೋಟಿ, ಡಿ. ಚಂದ್ರಶೇಖರಯ್ಯ ಮತ್ತಿತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ