LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಿಚ್ಚ ಸುದೀಪ್ ಬಿಡುಗಡೆ ಮಾಡಿದ   ಗೌರಿ ಚಿತ್ರದ ಟ್ರೇಲರ್







     ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ  ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ 'ಗೌರಿ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.  ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

     ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ ಶ್ಯಾಮ್ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.


     ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್ ಅವರು "ಇಂದ್ರಜಿತ್‍ ಮತ್ತು ನಾನು ಹಳೆಯ ಸ್ನೇಹಿತರು. ಇಬ್ಬರೂ ಜೊತೆಗೆ ಬ್ಯಾಡ್ಮಿಂಟನ್‍ ಆಡುತ್ತಿದ್ದೆವು. ಲಂಕೇಶ್‍ ಅವರ ಮಗ ಅಂತ ಗೊತ್ತಿರಲಿಲ್ಲ. ಆದರೆ, ಬಹಳ ಚೆನ್ನಾಗಿ ಶಟಲ್‍ ಆಡೋರು. ಸಮರ್ಜಿತ್‍ನ ಯಶಸ್ಸು ಅವನೊಬ್ಬನ ಯಶಸ್ಸು ಆಗಿರುವುದಿಲ್ಲ. ಅದರಲ್ಲಿ ಇಂದ್ರಜಿತ್‍ ಅವರ ಯಶಸ್ಸೂ ಇದೆ. ಇನ್ನು   ಸಾನ್ಯ ಅವರು ಉತ್ತಮ ನಟಿ ಅಷ್ಟೇ ಅಲ್ಲ ಒಳ್ಳೆಯ ಬರಹಗಾರ್ತಿ ಕೂಡ. ಅದು ನನಗೆ ಬಿಗ್ ಬಾಸ್ ಸಮಯದಲ್ಲಿ ತಿಳಿಯಿತು.  ಸಿನಿಮಾ ಬಿಡುಗಡೆಯಾದ ಮೇಲೆ ಜೀವನ ಇದೇ ತರಹ ಇರುವುದಿಲ್ಲ. ಅದು ನಿಮ್ಮನ್ನು ಎಲ್ಲಿಗೆ ಕೊಂಡೊಯ್ಯುತ್ತದೋ ಗೊತ್ತಿಲ್ಲ. ಅದಕ್ಕೆ ಸಿದ್ದರಾಗಿರಿ" ಎಂದರು.


     "ಸುದೀಪ್ ಹಾಗೂ ನನ್ನ ಗೆಳೆತನ ಎರಡು ದಶಕಗಳಿಗೂ ಮೀರಿದ್ದು. ಅವರ ಜೊತೆ ಶಟಲ್ ಆಡಿದ ದಿನಗಳು ಈಗಲೂ ಕಣ್ಣಮುಂದೆ ಇದೆ. ಹಿಂದೆ ನನ್ನ ನಿರ್ದೇಶನದ ಚಿತ್ರವೊಂದರಲ್ಲಿ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದರು. ಆದರೆ ಅವರು ನನ್ನಿಂದ ಯಾವ ಸಂಭಾವನೆಯನ್ನು ಪಡೆದಿರಲಿಲ್ಲ. ಆಮೇಲೆ ನಾನು ಅವರಿಗೆ ಏನು ಕೊಡುವುದು? ಅವರ ಬಳಿ ಎಲ್ಲಾ ಇದೆ ಎಂದು ಕೊಂಡು, ಅವರ ಮಗಳಿಗೆ ವಿಶೇಷ ಉಡುಗೊರೆ ತೆಗೆದುಕೊಂಡು ಅವರ ಮನೆಗೆ ಹೋದೆ. ಆದರೆ ಸುದೀಪ್ ಅವರು ಅದನ್ನು ನನಗೆ ಕೊಡಲು ಬಿಡಲಿಲ್ಲ. ಈ ರೀತಿ ನನಗೆ ಮೊದಲಿನಿಂದಲೂ ಅವರು ನನಗೆ ಸಪೋರ್ಟ್ ಮಾಡುತ್ತಾ ಬರುತ್ತಿದ್ದಾರೆ. ಇಂದು ನನ್ನ ಮಗನ ಮೊದಲ ಚಿತ್ರದ  ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ ಅವರಿಗೆ ಧನ್ಯವಾದ. ಇಂದು ಕೂಡ ನನ್ನ ಬಳಿ ಅವರು ಯಾವ ಉಡುಗೊರೆ ತೆಗೆದುಕೊಳ್ಳುವುದಿಲ್ಲ. ಹಾಗಾಗಿ ಅವರಿಗಾಗಿ ಇಂಗ್ಲೆಂಡ್ ನಿಂದ ವಿಶೇಷ ಬ್ಯಾಟ್ ತರಿಸಿದ್ದೇನೆ" ಎಂದು  ಇಂದ್ರಜಿತ್ ಲಂಕೇಶ್ ತಿಳಿಸಿದರು.


     'ಗೌರಿ’ ಚಿತ್ರದ ಟ್ರೇಲರ್ ಸುದೀಪ್ ಅವರು ಬಿಡುಗಡೆ ಮಾಡಿದಕ್ಕೆ ಸಂತಸ ವ್ಯಕ್ತಪಡಿಸಿದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್, "ಆಗಸ್ಟ್ ಹದಿನೈದರಂದು ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ" ಎಂದರು.


     ನೈಜ ಘಟನೆ ಆಧರಿಸಿ ನಿರ್ಮಾಣವಾಗಿರುವ ‘ಗೌರಿ’ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ (ವಿಶೇಷ ಪಾತ್ರ), ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹಳಷ್ಟು ಜನ ನಟಿಸಿದ್ದಾರೆ. ಚಿತ್ರಕ್ಕೆ

ಎ ಜೆ ಶೆಟ್ಟಿ ಹಾಗೂ ಕೃಷ್ಣಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.
















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್