Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿಚ್ಚ ಸುದೀಪ್ ಬಿಡುಗಡೆ ಮಾಡಿದ   ಗೌರಿ ಚಿತ್ರದ ಟ್ರೇಲರ್







     ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ  ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ 'ಗೌರಿ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.  ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

     ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ ಶ್ಯಾಮ್ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.


     ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್ ಅವರು "ಇಂದ್ರಜಿತ್‍ ಮತ್ತು ನಾನು ಹಳೆಯ ಸ್ನೇಹಿತರು. ಇಬ್ಬರೂ ಜೊತೆಗೆ ಬ್ಯಾಡ್ಮಿಂಟನ್‍ ಆಡುತ್ತಿದ್ದೆವು. ಲಂಕೇಶ್‍ ಅವರ ಮಗ ಅಂತ ಗೊತ್ತಿರಲಿಲ್ಲ. ಆದರೆ, ಬಹಳ ಚೆನ್ನಾಗಿ ಶಟಲ್‍ ಆಡೋರು. ಸಮರ್ಜಿತ್‍ನ ಯಶಸ್ಸು ಅವನೊಬ್ಬನ ಯಶಸ್ಸು ಆಗಿರುವುದಿಲ್ಲ. ಅದರಲ್ಲಿ ಇಂದ್ರಜಿತ್‍ ಅವರ ಯಶಸ್ಸೂ ಇದೆ. ಇನ್ನು   ಸಾನ್ಯ ಅವರು ಉತ್ತಮ ನಟಿ ಅಷ್ಟೇ ಅಲ್ಲ ಒಳ್ಳೆಯ ಬರಹಗಾರ್ತಿ ಕೂಡ. ಅದು ನನಗೆ ಬಿಗ್ ಬಾಸ್ ಸಮಯದಲ್ಲಿ ತಿಳಿಯಿತು.  ಸಿನಿಮಾ ಬಿಡುಗಡೆಯಾದ ಮೇಲೆ ಜೀವನ ಇದೇ ತರಹ ಇರುವುದಿಲ್ಲ. ಅದು ನಿಮ್ಮನ್ನು ಎಲ್ಲಿಗೆ ಕೊಂಡೊಯ್ಯುತ್ತದೋ ಗೊತ್ತಿಲ್ಲ. ಅದಕ್ಕೆ ಸಿದ್ದರಾಗಿರಿ" ಎಂದರು.


     "ಸುದೀಪ್ ಹಾಗೂ ನನ್ನ ಗೆಳೆತನ ಎರಡು ದಶಕಗಳಿಗೂ ಮೀರಿದ್ದು. ಅವರ ಜೊತೆ ಶಟಲ್ ಆಡಿದ ದಿನಗಳು ಈಗಲೂ ಕಣ್ಣಮುಂದೆ ಇದೆ. ಹಿಂದೆ ನನ್ನ ನಿರ್ದೇಶನದ ಚಿತ್ರವೊಂದರಲ್ಲಿ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದರು. ಆದರೆ ಅವರು ನನ್ನಿಂದ ಯಾವ ಸಂಭಾವನೆಯನ್ನು ಪಡೆದಿರಲಿಲ್ಲ. ಆಮೇಲೆ ನಾನು ಅವರಿಗೆ ಏನು ಕೊಡುವುದು? ಅವರ ಬಳಿ ಎಲ್ಲಾ ಇದೆ ಎಂದು ಕೊಂಡು, ಅವರ ಮಗಳಿಗೆ ವಿಶೇಷ ಉಡುಗೊರೆ ತೆಗೆದುಕೊಂಡು ಅವರ ಮನೆಗೆ ಹೋದೆ. ಆದರೆ ಸುದೀಪ್ ಅವರು ಅದನ್ನು ನನಗೆ ಕೊಡಲು ಬಿಡಲಿಲ್ಲ. ಈ ರೀತಿ ನನಗೆ ಮೊದಲಿನಿಂದಲೂ ಅವರು ನನಗೆ ಸಪೋರ್ಟ್ ಮಾಡುತ್ತಾ ಬರುತ್ತಿದ್ದಾರೆ. ಇಂದು ನನ್ನ ಮಗನ ಮೊದಲ ಚಿತ್ರದ  ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ ಅವರಿಗೆ ಧನ್ಯವಾದ. ಇಂದು ಕೂಡ ನನ್ನ ಬಳಿ ಅವರು ಯಾವ ಉಡುಗೊರೆ ತೆಗೆದುಕೊಳ್ಳುವುದಿಲ್ಲ. ಹಾಗಾಗಿ ಅವರಿಗಾಗಿ ಇಂಗ್ಲೆಂಡ್ ನಿಂದ ವಿಶೇಷ ಬ್ಯಾಟ್ ತರಿಸಿದ್ದೇನೆ" ಎಂದು  ಇಂದ್ರಜಿತ್ ಲಂಕೇಶ್ ತಿಳಿಸಿದರು.


     'ಗೌರಿ’ ಚಿತ್ರದ ಟ್ರೇಲರ್ ಸುದೀಪ್ ಅವರು ಬಿಡುಗಡೆ ಮಾಡಿದಕ್ಕೆ ಸಂತಸ ವ್ಯಕ್ತಪಡಿಸಿದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್, "ಆಗಸ್ಟ್ ಹದಿನೈದರಂದು ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ" ಎಂದರು.


     ನೈಜ ಘಟನೆ ಆಧರಿಸಿ ನಿರ್ಮಾಣವಾಗಿರುವ ‘ಗೌರಿ’ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ (ವಿಶೇಷ ಪಾತ್ರ), ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹಳಷ್ಟು ಜನ ನಟಿಸಿದ್ದಾರೆ. ಚಿತ್ರಕ್ಕೆ

ಎ ಜೆ ಶೆಟ್ಟಿ ಹಾಗೂ ಕೃಷ್ಣಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.
















Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ