Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ಅಭಿವೃದ್ಧಿಗೆ ಸಹಿಸದ ವಿರೋಧಿಗಳಿಂದ ಅಪಪ್ರಚಾರ : ರೋಹಿಣಿ ಪಾಟೀಲ 

ನೇಗಿನಹಾಳ. ಕಳೆದ ಎರಡು ವರ್ಷಗಳಿಂದ ಚನ್ನಮ್ಮನ ಕಿತ್ತೂರ ಕ್ಷೇತ್ರದಲ್ಲಿ ಅನೇಕ ಕೆಲಸ ಕಾರ್ಯಗಳು ಕ್ಷಿಪ್ರವಾಗಿ ನಡೆಯುತ್ತಿದ್ದು ಮೂಲಭೂತ ಸೌಕರ್ಯ, ರಸ್ತೆ, ಕಿತ್ತೂರು ಪಟ್ಟಣ ಅಭಿವೃದ್ಧಿಗೆ, ಸೊಗಸಿನ ಕಿತ್ತೂರ ಉತ್ಸವ, ಥಿಮ್ಸ್ ಪಾರ್ಕ್ ನಿರ್ಮಾಣ, ಗ್ರಾಮೀಣ ಅಭಿವೃದ್ಧಿ ಇನ್ನೂ ಅನೇಕ ಜನ ಸಾಮಾನ್ಯರ ಕೆಲಸ ಕಾರ್ಯಗಳು ಕ್ಷೇತ್ರದ ತುಂಬೆಲ್ಲ ನಡೆಯುತ್ತಿರುವದು ವಿರೋಧಿಗಳಿಗೆ ಸಹಿಸಲಿಕ್ಕೆ ಆಗುತ್ತಿಲ್ಲ ಹೀಗಾಗಿ ಕೀಳು ಮಟ್ಟದಲ್ಲಿ ಅಪಪ್ರಚಾರ ಬಿಜೆಪಿ ನಾಯಕರು ಮಾಡುತ್ತಿದ್ದು ಇದೆ ಅವರಿಗೆ ಶೋಭೆ ತರುವದಿಲ್ಲ ಎಂದು ಕೆ ಪಿ ಸಿ ಸಿ ಸದಸ್ಯರು, ಮಾಜಿ ಜಿ ಪಂ ಸದಸ್ಯರಾದ  ರೋಹಿಣಿ ಬಾಬಾಸಾಹೇಬ ಪಾಟೀಲ ಹೇಳಿದರು.


ಅವರು ಗುರುವಾರದಂದು  ಗ್ರಾಮದ ಶಾಸಕರ ಗ್ರಹ ಕಚೇರಿಯಲ್ಲಿ ಅಪಾರ ಪ್ರಮಾಣದ ಶಾಸಕ ಬಾಬಾಸಾಹೇಬ ಪಾಟೀಲ ಅಭಿಮಾನಿಗಳ ಬಳಗ ಏರ್ಪಡಿಸಿದ ಸಭೆಯಲ್ಲಿ ಮಾತನಾಡಿ  ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಕೆಲವು ದಿನಗಳ ಹಿಂದೆ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ನಾವು ಪ್ರೀತಿಯಿಂದ ನಮ್ಮವರನ್ನು ಮಕ್ಕಳು ಅಂತಾ  ಬೈಯುತ್ತೇವೆ.ಅದನ್ನು ಬಿಜೆಪಿ ಮಕ್ಕಳು  ಅಪಾರ್ಥ ತಿಳಿಬಾರ್ದು ಅಂತಾ ಹೇಳಿದ್ದಾರೆ. ನಾವು 2014 ರಲ್ಲಿ ಸೊತ್ತು ಜನ ಸೇವೆಯಲ್ಲಿ ತೊಡಗಿಸಿಕೊಂಡೇವು, ಹಿಂದಿನ ಶಾಸಕರ ಕೆಲಸ ಕಾರ್ಯಗಳಲ್ಲಿ ಮೂಗು ತೋರಿಸಲಿಲ್ಲ. ಆದರೆ ಬಾಬಾಸಾಹೇಬ ಪಾಟೀಲರು  ನಮ್ಮ ಯುವ ಜನಾಂಗ ಮತ್ತು ಹಿರಿಯರ, ಮಹಿಳೆಯರ ಆಶೀರ್ವಾದದಿಂದ ಶಾಸಕರಾದರು. ಆದರೆ ನಿರಂತರ ಶಾಸಕರ ಮತ್ತು ಅವರ ಅಭಿಮಾನಿಗಳ ವಿರುದ್ಧವಾಗಿ, ಕೆಲಸ ಕಾರ್ಯಗಳಲ್ಲಿ ಬಗ್ಗೆ ಕೀಳು ಮಟ್ಟದಲ್ಲಿ ಟೀಕೆ ಬಿಜೆಪಿ ಯವರು ಮಾಡುತ್ತಿದ್ದಾರೆ. ಅವರು ಹೋರಾಟ ಮಾಡಲಿ ನಾವು ಶರಣರ, ಹಿರಿಯರ, ಮಠ ಮಂದಿರಗಳ ಆಶೀರ್ವಾದದಿಂದ ಜನ ಸೇವೆ ಮಾಡುತ್ತಿದ್ದು. ನಮ್ಮ ಕಾರ್ಯಕರ್ತರು ಅವರ ಮಟ್ಟಕ್ಕೆ ಇಳಿಯದೆ ಶಾಂತಿಯಿಂದ ಹೋರಾಟ ಮಾಡೋಣ ಎಂದರು.

    ಈ ಸಭೆಯಲ್ಲಿ ಅನೇಕ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಮಾತನಾಡಿ ಧಣಿ ಬಾಬಾಸಾಹೇಬ ಅವರ ಯಾರಿಗೂ ಹೆದರುವ ಮಾತಿಲ್ಲ ಅವರೊಂದಿಗೆ ನಾವಿದ್ದೇವೆ  ಎಂದು ಹೇಳಿದರು.

  ಸಭೆಯಲ್ಲಿ ಮುಖಂಡರಾದ ನಾನಾಸಾಹೇಬ ಪಾಟೀಲ, ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ,ಕಿತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಗನಗೌಡ ಪಾಟೀಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಾಜು ಸಲೀಮ್ ಕಾಶಿಮನವರ, ಶಂಕರಪ್ಪ ಹೊಳಿ, ಶೇಖರ ಯರಗೊಪ್ಪ, ಬಾಬು ಕಟ್ಟಿ, ಅಬ್ಬಾಸ ಪಿರಜಾದೆ, ಬಸವರಾಜ ಚಿಕನಗೌಡರ, ಸುರೇಶ ಕಂಡ್ರಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಸಹಸ್ರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ