Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಎನ್‌. ರಾಜಣ್ಣ ವಜಾ ಖಂಡನೀಯ: ರಾಜಶೇಖರ ತಳವಾರ 



ಬೆಳಗಾವಿ: ಸತ್ಯ ಹೇಳಿದ್ದಕ್ಕೆ ಸಚಿವ ಕೆ.ಎನ್‌. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದು ಅತ್ಯಂತ ಖಂಡನೀಯ ಎಂದು ವಾಲ್ಮೀಕಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ತಳವಾರ ಬೇಸರ ವ್ಯಕ್ತಪಡಿಸಿದರು.


ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೆ.ಎನ್‌.ರಾಜಣ್ಣ ಎಸ್ಟಿ ಸಮುದಾಯದ ಒಬ್ಬ ಹಿರಿಯ ನಾಯಕರು. ರಾಹುಲ್‌ ಗಾಂಧಿ ಅವರ ʼಮತಗಳ್ಳತನʼ ಆರೋಪ ಸಂಬಂಧ ರಾಜಣ್ಣ ಇರುವ ಸತ್ಯವನ್ನು ಹೇಳಿದ್ದರು. ಆ ಕಾರಣಕ್ಕೇ ಅವರನ್ನೀಗ ಸಂಪುಟದಿಂದ ಹೊರ ದಬ್ಬಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ತಯಾರಿ ನಡೆದಾಗ ನಮ್ಮ ಸರ್ಕಾರವೇ ಇತ್ತು. ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರಿಂದ ಹಿಡಿದು ಎಲ್ಲಾ ಅಧಿಕಾರ ವರ್ಗ ನಮ್ಮವರೇ ಇದ್ದರು ಮತ್ತು ಚುನಾವಣಾ ಆಯೋಗ ಕೊಟ್ಟ ಮತದಾರರ ಪಟ್ಟಿಯನ್ನು ನಾವು ನೋಡಿಕೊಳ್ಳಬೇಕಿತ್ತು ಎಂದಿದ್ದಾರೆ. ಇದರಲ್ಲಿ ಅವರ ತಪ್ಪೇನಿದೆ? ಎಂದು ರಾಜಶೇಖರ ತಳವಾರ ಪ್ರಶ್ನಿಸಿದರು.


ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಶಿಕ್ಷೆ ಅನುಭವಿಸುವಂತಾಗಿದೆ. ನಿಜಕ್ಕೂ ಇದು ದುರಂತ ಮತ್ತು ಖಂಡನೀಯ. ಕಾಂಗ್ರೆಸ್‌ ಹೈಕಮಾಂಡ್‌ ತಮ್ಮ ನಡೆ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.


ಮಧುಗಿರಿ ಕ್ಷೇತ್ರದಂದ 35,500ಕ್ಕೂ ಹೆಚ್ಚು ಬಹುಮತದಿಂದ ಗೆಲುವು ಸಾಧಿಸಿ ರಾಜ್ಯದ ಸಹಕಾರ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ನೇರ ನಡೆನುಡಿ, ನಿಷ್ಠಾವಂತ, ಎದೆಗಾರಿಕೆ, ನಿಷ್ಠುರವಾಗಿ ಮಾತನಾಡುವ ಹಾಗೂ ಅತಿಯಾದ ಜನಬೆಂಬಲ ಹೊಂದಿರುವ ಒಬ್ಬ ಅಹಿಂದ ನಾಯಕ ಕೆ.ಎನ್.ರಾಜಣ್ಣರ  ಏಳಿಗೆ ಸಹಿಸಲಾಗದ  ಕೆಲವು ಕುತಂತ್ರಿಗಳು,  ಈ ರೀತಿ ಮಾಡಿದ್ದಾರೆ.  ಉನ್ನತ ಮಟ್ಟಕ್ಕೆ ಬೆಳೆದಿರುವುದು ಸಹಿಸಲಾರದೆ ಕಾಣದ ಕೈಗಳ ಒತ್ತಡಕ್ಕೆ ಮಣಿದ ಹೈಕಮಾಂಡ್ ಇಂದು ಸಚಿವ ಸಂಪುಟದಿಂದ ಕೈ ಬಿಟ್ಟಿರುವುದು ಇಡೀ ಅಹಿಂದ ಸಮುದಾಯಕ್ಕೆ ಮಾಡಿದ ಘನ ಘೋರ ಅಪಮಾನವಾಗಿದೆ ಎಂದು ಆಕ್ರೋಶ ಹೊರಹಾಕಿದರು.


30ವರ್ಷದ ನಂತರ ವರ್ಷಗಳ ನಂತರ ಲೋಕಸಭಾ ಸದಸ್ಯರನ್ನು ಗೆಲ್ಲಿಸಿಕೊಂಡು ಬಂದರಲ್ಲದೆ ಹಲವು ಬಾರಿ ಮುಖ್ಯಮಂತ್ರಿಗಳನ್ನು ಕರೆದುಕೊಂಡು ಹೋಗಿ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ.  ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಮೂವರು ಸಚಿವರಿದ್ದರು. ಈ ಪೈಕಿ ಇಬ್ಬರನ್ನು ಈಗ ಸಂಪುಟದಿಂದ ಕೈಬಿಡಲಾಗಿದೆ. ಕೆ.ಎನ್‌. ರಾಜಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗ. ಹೀಗಿರುವಾಗ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವುದನ್ನು ಏಕೆ ತಡೆಯಲಿಲ್ಲ ಎಂಬುದನ್ನು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.


ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅತಿ ಹೆಚ್ಚು ಮಹತ್ವವನ್ನು ನೀಡುತ್ತಿರುವ ರಾಜಕಾರಣಿಗಳಲ್ಲಿ ಮೊದಲನೆಯವರಾಗಿ ನಿಲ್ಲುತ್ತಾರೆ. ಶೂ ಭಾಗ್ಯದ ರೂವಾರಿಗಳು ಕೂಡ ಕೆ.ಎನ್.ರಾಜಣ್ಣನವರೇ ಆಗಿರುತ್ತಾರೆ.  ಹೀಗಿರುವಾಗ ಕುತಂತ್ರದಿಂದ ಸಚಿವರನ್ನು ಕೈ ಬಿಡಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ರಾಜಶೇಖರ ತಳವಾರ, ಸಂಜು ನಾಯಕ ಹಾಗೂ ಇತರರು  ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ