Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ್ಞಾನ ಮತ್ತು ಆರೋಗ್ಯ ಇವೆರಡೇ ಶ್ರೇಷ್ಠ ಆಸ್ತಿಗಳು : ಶಿವಲಿಂಗೇಶ್ವರ ದೇವರು







ಬೆಳಗಾವಿ: ಕೂಡಿಟ್ಟ ಹಣ, ಒಡವೆ, ಬಂಗಾರ ಯಾರಾದರೂ ಕಳ್ಳತನ ಮಾಡಬಹುದು, ಅಲಕ್ಷವಹಿಸಿದರೆ ಅವು ಪರರ ಪಾಲಾಗಲೂಬಹುದು. ಆದರೆ ಯಾರಿಂದಲೂ ಕಳ್ಳತನ ಮಾಡಲಾಗದ ಜೀವನದ ಕೊನೆಯವರೆಗೂ ನಮ್ಮ ಜೊತೆಗಿರುವ ಎರಡು ಶ್ರೇಷ್ಠ ಆಸ್ತಿಗಳೆಂದರೆ ಅವು ಜ್ಞಾನ ಮತ್ತು ಆರೋಗ್ಯ. ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಉತ್ತಮ ಆರೋಗ್ಯ ಸಂಪಾದಿಸಿಕೊಂಡು ತಮ್ಮ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕೆಂದು ಜುಂಜರವಾಡದ ಶಿವಲಿಂಗೇಶ್ವರ ದೇವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಅವರು ಇಂದು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸಿದ್ಧರಾಮೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದರು.



ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕಾಕತಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುರೇಶ ಸಿಂಘಿ ಮಾತನಾಡಿ ಸರ್ಕಾರ ವಿದ್ಯಾರ್ಥಿಗಳಿಗಾಗಿ ಅನೇಕ ಭಾಗ್ಯಗಳನ್ನು ಅನುಷ್ಠಾನಕ್ಕೆ ತರುತ್ತಿದೆ. ಉತ್ತಮ ಆರೋಗ್ಯವಿದ್ದರೆ ಮಾತ್ರ ಈ ಎಲ್ಲಾ ಭಾಗ್ಯಗಳನ್ನು ಅನುಭವಿಸಬಹುದು. ಅನಾರೋಗ್ಯ ಪೀಡಿತವಾದರೆ ಸರ್ಕಾರ ಎಷ್ಟೇ ಭಾಗ್ಯಗಳನ್ನು ಘೋಷಿಸಿದರು ಅವು ಪ್ರಯೋಜನವಾಗುವುದಿಲ್ಲ. ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ತಮ ಆರೋಗ್ಯ ಪಡೆದುಕೊಳ್ಳಬೇಕು ಎಂದರು.

ಇನ್ನೋರ್ವ ಅತಿಥಿ ಸಮಾಜಸೇವಕ ಮುರುಗೇಂದ್ರಗೌಡ ಪಾಟೀಲ ಮಾತನಾಡಿ ಪ್ರಸ್ತುತ ಮೊಬೈಲ್ ಮತ್ತು ಟಿವಿಗಳ ಹಾವಳಿಯಿಂದ ಮಕ್ಕಳಲ್ಲಿ ಕ್ರಿಡೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಮೊಬೈಲ್ ಗಳಲ್ಲಿ ಹೆಚ್ಚು ಆಟಗಳನ್ನಾಡುತ್ತಾ ದೈಹಿಕ ಶ್ರಮತೆ ಇಲ್ಲದೆ ವಿದ್ಯಾರ್ಥಿಗಳು ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಗಳ ದಾಸರಾಗದೆ ಮೈದಾನಗಳಲ್ಲಿ ಆಟವಾಡುತ್ತಾ ಸದೃಢ ಆರೋಗ್ಯ ಸಂಪಾದಿಸಿಕೊಳ್ಳಬೇಕು ಎಂದರು.

ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್ .ಪಿ. ಹಿರೇಮಠ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಶಾಲೆಯ ಸಂಯೋಜಕ ರಾಜಶೇಖರ ಪಾಟೀಲ, ದೈಹಿಕ ನಿರ್ದೇಶಕ ಶ್ರೀಧರ ನೇಮಗೌಡ ಉಪಸ್ಥಿತರಿದ್ದರು . ಪ್ರಾರಂಭದಲ್ಲಿ ಶಾಲೆಯ ಪ್ರಾಚಾರ್ಯೆ ಪೂಜಾ ನಾಯಕ ಸ್ವಾಗತಿಸಿದರು. ಶಿಕ್ಷಕಿ ಸ್ವಾತಿ ಪೂಜಾರ ನಿರೂಪಿಸಿದರು, ಶೀನಾ ನಾಯಕ್ ಅತಿಥಿ ಪರಿಚಯಿಸಿದರು. ದೈಹಿಕ ಶಿಕ್ಷಕ ಉಮೇಶ ಪಟ್ಟೇದ ಕ್ರೀಡಾಕೂಟ ನಡೆಸಿಕೊಟ್ಟರು. ಕೊನೆಗೆ ಶಿಕ್ಷಕಿ ಪ್ರೀತಿ ಅವಲಕ್ಕಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ