LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲಿ ಕೋಡಿಹಳ್ಳಿ ಶ್ರೀ ಸ್ಫೋಟಕ ಭವಿಷ್ಯ

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ, "ಸದ್ಯಕ್ಕೆ ಏನೂ ತೊಂದರೆ ಕಾಣುತ್ತಿಲ್ಲ. ಮುಂದೆ ತೊಂದರೆ ಆಗುತ್ತಾ ಎಂಬುದಕ್ಕೆ, ಬೇಡ ಮತ್ತು ಸನ್ಯಾಸಿಯ ಕಥೆ ಏನಾದರೂ ಹೇಳಿದ್ರೆ ಮುಂದೆ ಓಡಾಡದ ಹಾಗೆ ಮಾಡಿಬಿಟ್ಟೀರಾ.." ಎಂದು ಹಾಸ್ಯ ಚಟಾಕಿ ಹಾರಿಸಿದರು‌.


ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, "ಒಬ್ಬ ಸನ್ಯಾಸಿ ತಪಸ್ಸಿಗೆ ಕುಳಿತಿದ್ದನಂತೆ. ಆಗ ಒಬ್ಬ ಬೇಟೆಗಾರ ಬೇಟೆಗೆ ಜಿಂಕೆ ಓಡಿಸಿಕೊಂಡು ಬಂದನಂತೆ. ಸನ್ಯಾಸಿ ಮುಂದೆ ಜಿಂಕೆ ಹೋಯಿತಂತೆ. ಆಗ ಬೇಟೆಗಾರ ಸನ್ಯಾಸಿ ಬಳಿ ಜಿಂಕೆ ಹೋಯಿತಾ ಎಂದು ಕೇಳಿದನಂತೆ. ಅದಕ್ಕೆ ಸನ್ಯಾಸಿ ಹೋಯಿತು ಅಂತ ಹೇಳಿದ್ರೆ ಕೊಂದ ಪಾಪ ತಟ್ಟುತ್ತೆ, ಇಲ್ಲ ಅಂತ ಹೇಳಿದರೆ ಸುಳ್ಳು ಹೇಳಿದ ಪಾಪವೂ ತಟ್ಟುತ್ತದೆ. ಹೀಗಿದ್ದಾಗ ಯಾವುದು ನೋಡಿತು ಅದಕ್ಕೆ ಮಾತು ಬರಲ್ಲ, ಯಾವುದು ಮಾತನಾಡಿತು ಅದಕ್ಕೆ ಮಾತನಾಡಲು ಬರಲ್ಲ ಎಂದಿದ್ದನಂತೆ" ಎಂದು ಕಥೆ ಬಿಚ್ಚಿಟ್ಟರು.


"ಜನರು ಎಲ್ಲವನ್ನೂ ಮನಃಶಾಂತಿಯಿಂದ ತೆಗೆದುಕೊಳ್ಳುತ್ತಿಲ್ಲ. ದ್ವೇಷ ಭಾಷೆಯಿಂದ ತೆಗೆದುಕೊಳ್ಳುತ್ತಿದ್ದಾರೆ. ಇನ್ನು ಆತ್ಮಸಾಕ್ಷಿಯಾಗಿ ಜನರು‌ ಮತ ನೀಡುತ್ತಿಲ್ಲ. ಎಲ್ಲಿಯವರೆಗೆ ಮತಗಳನ್ನು ಮಾರಾಟ ಮಾಡುತ್ತಾರೋ ಅಲ್ಲಿಯವರೆಗೆ ಲಾಭ - ನಷ್ಟ ಇರುತ್ತದೆ. ಹಿಂದಿನ‌ ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ದರು. ಈಗ ಧರ್ಮವೂ ಇಲ್ಲ, ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತಿವೆ. ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಮತ ಹಾಕುತ್ತಾನೋ. ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ" ಎಂದು ಹೇಳಿದರು.


"ಇದು ಕ್ರೋಧಿನಾಮ ಸಂವತ್ಸರ. ಕ್ರೋಧ ಅಂದರೆ ಸಿಟ್ಟು, ಇದರಲ್ಲಿ ಒಳ್ಳೆಯದು, ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೇ ಜಾಸ್ತಿ ಇರುತ್ತದೆ. ಪ್ರಾಕೃತಿಕ ದೋಷ ಮುಂದುವರೆಯುತ್ತದೆ. ಅಮವಾಸ್ಯೆವರೆಗೆ ಒಂದು ಭಾಗಕ್ಕೆ ನಿಲ್ಲುತ್ತದೆ. ನಂತರ ಮತ್ತೊಂದು ಭಾಗಕ್ಕೆ ಹೋಗುತ್ತದೆ. ಮುಂದೆ ಅನಿಷ್ಠ ಜಾಸ್ತಿ ಇದೆ. ಕತ್ತಲು ಬೆಳಕು ಎರಡು ಇರುತ್ತದೆ. ಅದರಲ್ಲಿ ಕತ್ತಲು ಜಾಸ್ತಿ ಇರುತ್ತದೆ" ಎಂದು ನುಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್