LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕೋಮಲ್ ಚಿತ್ರ  ರೋಲೆಕ್ಸ್  ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ


     ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ‌‌'ರೋಲೆಕ್ಸ್'.

      ಈ ಹಿಂದೆ ಬಿಲ್ ಗೇಟ್ಸ್  ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಸಿ.ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು,  ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಕುಮಾರ್ ಅವರು 'ರೋಲೆಕ್ಸ್' ಚಿತ್ರದಲ್ಲಿ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

     ಕಾಮಿಡಿಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಹಾಗೂ ಒಂದು ಹಾಡಿನ ಚಿತ್ರೀಕರಣ ಮುಕ್ತಾಯವಾಗಿದೆ‌. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಅದು ಮುಕ್ತಾಯವಾದರೆ, 'ರೋಲೆಕ್ಸ್' ಚಿತ್ರದ ಚಿತ್ರೀಕರಣ ಸಂಪೂರ್ಣವಾಗುತ್ತದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

     ಅಚ್ಯುತಕುಮಾರ್, ನವೀನ್ ಪಡೀಲ್, ಅರುಣ ಬಾಲರಾಜ್ ಪ್ರಮುಖಪಾತ್ರದಲ್ಲಿ ನಟಿಸಿದ್ದು, ನಿರ್ಮಾಪಕರಾದ ಅಂಬಟಿ ಮಧು ಮೋಹನ್ ಕೃಷ್ಣ ಅವರು ಸಹ ಮುಖ್ಯಪಾತ್ರದಲ್ಲಿದ್ದಾರೆ.

     ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಸಂಕಲನ, ಮುರಳಿಕೃಷ್ಣ  ನಿರ್ಮಾಣ ನಿರ್ವಹಣೆ ಇದೆ. ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆ