Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎಸ್‌ಸಿ ಕರ್ಮಕಾಂಡ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ

ಬೆಂಗಳೂರು, ಮಾ., ೩೦: ಒಂದಿಲ್ಲಾ ಒಂದು ವಿವಾದಗಳಿಂದ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಈಗ ನೇಮಕಾತಿ ಆಯ್ಕೆ ಪಟ್ಟಿಯ ಗೌಪ್ಯ ಕಡತವೇ ನಾಪತ್ತೆಯಾಗಿದ್ದು ವರದಿಯಾಗಿದೆ.
ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ಗಳ ಆಯ್ಕೆ ಪಟ್ಟಿ ಒಳಗೊಂಡ ಗೌಪ್ಯ ಕಡತ ನಾಪತ್ತೆಯಾಗಿದ್ದು ಕೆಪಿಎಸ್‌ಸಿ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯಕ್ಷಮತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

೨೦೧೬ ರಲ್ಲಿ ಕೊಳಗೇರಿ ಮಂಡಳಿ ಕಿರಿಯ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. ೨೦೧೮ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಚ್.ಡಿ. ವಿವೇಕಾನಂದ ಅವರು ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ್ದ ಹೈಕೋರ್ಟ್ ಅರ್ಜಿದಾರರ ಪ್ರಕರಣವನ್ನು ಪರಿಗಣಿಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿತ್ತು ನಂತರ ಕರ್ನಾಟಕ ಹೈಕೋರ್ಟ್ ನಿರ್ದೇಶನ ಪ್ರಕಾರ ಕೆಪಿಎಸ್‌ಸಿ ಗೌಪ್ಯ ಶಾಖೆ-೩ ರಲ್ಲಿ ಆಯ್ಕೆ ಪಟ್ಟಿ ಕಡತವನ್ನು ಸಿದ್ಧಪಡಿಸಲಾಗಿತ್ತು.

ಕಳೆದ ಜನವರಿ ೨೨ ರಂದು ಬೆಂಗಳೂರಿನ ಉದ್ಯೋಗ ಸೌಧದಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ ನೇಮಕಾತಿಯ ಆಯ್ಕೆ ಪಟ್ಟಿಯನ್ನು ಸ್ವೀಕರಿಸಿತ್ತು. ಆ ಬಳಿಕ ಕಡತ ನಾಪತ್ತೆಯಾಗದೆ. ಕೆಪಿಎಸ್‌ಸಿಯ ಎಲ್ಲಾ ಶಾಖೆಗಳಲ್ಲಿ ಕಡತಕ್ಕಾಗಿ ಶೋಧ ನಡೆಸಲಾಗಿದೆ. ನಂತರ ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೇ-೨ಕ್ಕೆ ಹಿಂದುರುಗಿಸುವಂತೆ ಜ್ಞಾಪನ ಸಹ ಹೊರಡಿಸಿತ್ತು. ಸುಮಾರು ಒಂದು ತಿಂಗಳುಗಳ ಕಾಲ ಅಧಿಕಾರಿಗಳು ಮತ್ತು ಸಿಬ್ಬಂದಿ ಶೋಧ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವಿಭಾಗಕ್ಕೂ ಭೇಟಿ ನೀಡಿ ಪತ್ತೆ ಹಚ್ಚಿ ವರದಿ ಸಲ್ಲಿಸಲು ಅಧಿಕಾರಿಗಳು/ಸಿಬ್ಬಂದಿಗಳ ತಂಡವನ್ನು ರಚಿಸಿತ್ತು. ಆದರೆ ಎಲ್ಲಿಯೂ ಕಡತ ಸಿಗದೆ ಇದ್ದಾಗ ಕಳೆದ ಮಾರ್ಚ್ ೧೩ ರಂದು ನಡೆದ ಕೆಪಿಎಸ್‌ಸಿಯ ೩೬ ನೇ ಸಭೆಯಲ್ಲಿ, ಪ್ರಕರಣ ದಾಖಲಿಸುವ ನಿರ್ಧಾರ ಕೈಗೊಂಡಿದ್ದಾರೆ. ಕಡತ ನಾಪತ್ತೆ ಬಗ್ಗೆ ಕೆಪಿಎಸ್‌ಸಿ ಸಹಾಯಕ ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸದ್ಯ ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ