Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ.20ರಂದು 1 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ: ಕೃಷ್ಣಬೈರೇಗೌಡ





ಬಳ್ಳಾರಿ13: ರಾಜ್ಯದಲ್ಲಿ ಕಂದಾಯ ಗ್ರಾಮಗಳಾಗಿ ಘೋಷಣೆಯಾದರೂ ಸಂಪೂರ್ಣ ಅನುಷ್ಠಾನಕ್ಕೆ ಬಾರದ ಜನವಸತಿ ಪ್ರದೇಶಗಳ ೧ ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಮೂಲಕ ಪೂರ್ಣ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.


ಬಳ್ಳಾರಿಯಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಶತಮಾನಗಳಿಂದ ಕೆಲವು ಹಾಡಿ, ಹಟ್ಟಿ, ತಾಂಡಗಳಲ್ಲಿ ಜನರು ವಾಸವಿದ್ದರೂ ದಾಖಲೆ ಇರದ ಕಾರಣ ಅವರಿಗೆ ಸರಕಾರದ ಯಾವುದೇ ಸೌಲಭ್ಯ ಸಿಗುತ್ತಿರಲಿಲ್ಲ. ದಾಖಲೆ ರಹಿತ ಅಂತಹ ವಸತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಈ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ  ಈ ಯೋಜನೆ ಜಾರಿ ಮಾಡಲಾಗಿತ್ತು. ೩೬ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿತ್ತು. ಆದರೆ ಹಿಂದಿನ ಬಿಜೆಪಿ ಸರಕಾರ ಇದನ್ನು ಪೂರ್ಣ ಮಾಡಿರಲಿಲ್ಲ. ೭೦ಸಾವಿರ ಕುಟುಂಬಗಳಿಗೆ ಬಿಜೆಪಿ ಸರಕಾರದಲ್ಲಿ ಹಕ್ಕುಪತ್ರ ವಿತರಣೆ ಮಾಡಿತ್ತು. ಈಗ ಪುನಃ ನಾವೇ ಅಧಿಕಾರಕ್ಕೆ ಬಂದಿದ್ದು ಸುಮಾರು ೧.೫೦ ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಬಾಕಿ ಇದೆ. ಈಗ ಮೇ.೨೦ರಂದು ಇಂತಹ ೧ ಲಕ್ಷ ಕುಟುಂಬಗಳಿಗೆ ಹೊಸಪೇಟೆಯಲ್ಲಿ ನಡೆಯುವ ಸಾಧನಾ ಸಮಾವೇಶದಲ್ಲಿ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದರು.


ಪೋಡಿ ಅಭಿಯಾನ: ರಾಜ್ಯದಲ್ಲಿ ರೈತರು, ಬಡ ಕುಟುಂಬಗಳಿಗೆ ಸರಕಾರಿ ಜಮೀನು ಹಂಚಿಕೆಯಾಗಿದ್ದರೂ ಅಂತಹ ಜಮೀನುಗಳನ್ನು ಇನ್ನು ರೈತರ ಹೆಸರಿಗೆ ಪಟ್ಟಾ ಆಗಿಲ್ಲ. ಹೀಗಾಗಿ ಇಂತಹ ಜಮೀನು ಸರ್ವೆ ಮಾಡಲಾಗಿದ್ದು ಸದ್ಯ ೩೦ಸಾವಿರ ರೈತರಿಗೆ ಪೋಡಿ ಆಗಿಲ್ಲ ಎನ್ನುದು ಗೊತ್ತಾಗಿದೆ. ಪೋಡಿ ಅಭಿಯಾನದ ಮೂಲಕ ರೈತರಿಗೆ ಪಟ್ಟಾ ಮಾಡಿಕೊಡಲಾಗುವುದು ಎಂದ ಸಚಿವರು ಶತಮಾನಗಳಿಂದ ಕಂದಾಯ ಇಲಾಖೆಯಲ್ಲಿನ ದಾಖಲೆಗಳು ಕಳೆದು ಹೋಗುವ ದೂರುಗಳಿದ್ದವು. ಹೀಗಾಗಿ ಎಲ್ಲ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ರಾಜ್ಯಾದ್ಯಂತ ೨೦ ಕೋಟಿ ಪುಟಗಳ ದಾಖಲೆಗಳನ್ನು ಈಗಾಗಲೇ ಡಿಜಿಟಲೀಕರಣ ಮಾಡಲಾಗಿದೆ ಎಂದು ವಿವರಿಸಿದರು.


ಪೌತಿ ಅಭಿಯಾನ: ರಾಜ್ಯದಲ್ಲಿ ೫೨ ಲಕ್ಷಕ್ಕೂ ಹೆಚ್ಚು ಪ್ರಕರನ ಪೌತಿ ಆಗದೇ ಬಾಕಿ ಉಳಿದಿವೆ. ಬಳ್ಳಾರಿ ಜಿಲ್ಲೆಯೊಂದರಲ್ಲೇ ಸುಮಾರು ೭೦ಸಾವಿರ ಇಂತಹ ಪ್ರಕರಣಗಳಿವೆ. ಇವುಗಳನ್ನು ವಿಲೇವಾರಿ ಮಾಡಲು ಕಾಲಮಿತಿ ನಿಗದಿ ಮಾಡಲಾಗಿದೆ. ಇದಕ್ಕಾಗಿ ಪೌತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ, ತಾಲೂಕು ಕೇಂದ್ರಗಳಲ್ಲೂ ಪೌತಿ ಅಭಿಯಾನವನ್ನು ಯಶಸ್ವಿಯಾಗಿ ಜಾರಿಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ